ಮಾಯಾವತಿ 
ದೇಶ

ಬಿಎಸ್ ಪಿಯಲ್ಲಿ ಸಂಬಂಧಿಕರಿಗೆ ಪ್ರಮುಖ ಹುದ್ದೆ ನೀಡಿದ ಮಾಯಾವತಿ

ಕಾಂಗ್ರೆಸ್ ಹಾಗೂ ಬಿಜೆಪಿ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ ಎಂದು ವಾಗ್ದಾಳಿ ನಡೆಸುವ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಇದೀಗ ಆದೇ ಹಾದಿಯಲ್ಲಿ ಸಾಗಿದ್ದು, ಪಕ್ಷದ ಪ್ರಮುಖ ಹುದ್ದೆಗಳಿಗೆ ತಮ್ಮ ಸಂಬಂಧಿಕರನ್ನು ನೇಮಕ ಮಾಡಿದ್ದಾರೆ.

ಲಖನೌ: ಕಾಂಗ್ರೆಸ್ ಹಾಗೂ ಬಿಜೆಪಿ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ ಎಂದು ವಾಗ್ದಾಳಿ ನಡೆಸುವ ಬಿಎಸ್ ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಇದೀಗ ಆದೇ ಹಾದಿಯಲ್ಲಿ ಸಾಗಿದ್ದು, ಪಕ್ಷದ ಪ್ರಮುಖ ಹುದ್ದೆಗಳಿಗೆ  ತಮ್ಮ ಸಂಬಂಧಿಕರನ್ನು ನೇಮಕ ಮಾಡಿದ್ದಾರೆ.
ಲೋಕಸಭೆಯ ನಾಯಕರನ್ನಾಗಿ ಡ್ಯಾನಿಷ್ ಆಲಿ ಅವರನ್ನು ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಸಹೋದರ ಆನಂದ್ ಕುಮಾರ್ ಹಾಗೂ ರಾಷ್ಟ್ರೀಯ ಸಂಚಾಲಕರನ್ನಾಗಿ ಸೋದರ ಸಂಬಂಧಿ ಆಕಾಶ್ ಕುಮಾರ್ ಅವರನ್ನು ನೇಮಕ ಮಾಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ.
ಅಮೋರಾ ಸಂಸದ ಡ್ಯಾನಿಷ್ ಅಲಿ ಅವರನ್ನು ಲೋಕಸಭೆಯ ನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ನಗಿನಾ ಮೀಸಲು ಕ್ಷೇತ್ರದ ಸಂಸದ ಗಿರೀಶ್ ಚಂದ್ರ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌದರಿ, ಇದು ಬಿಎಸ್ ಪಿಯ ಆಂತರಿಕ ವಿಷಯ ಎಂದಿದ್ದಾರೆ.
ಡ್ಯಾನಿಷ್ ಆಲಿ ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ಆಪ್ತರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT