ಭುವನೇಶ್ವರ: ಕಳಪೆ ರಸ್ತೆ ಕಾಮಗಾರಿಗಾಗಿ ಲೋಕೋಪಯೋಗಿ ಕಿರಿಯ ಎಂಜಿನಿಯರ್ಗೆ ಸಾರ್ವಜನಿಕವಾಗಿ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ್ದ ಬಿಜೆಡಿ ಶಾಸಕ ಸರೋಜ್ ಮೆಹೆರ್ ಅವರನ್ನು ಸೋಮವಾರ ಒಡಿಶಾ ಪೊಲೀಸರು ಬಂಧಿಸಿದ್ದಾರೆ.
16ನೇ ವಿಧಾಸಭೆಯ ಅಧಿವೇಶನ ಆರಂಭವಾಗುವ ಮುನ್ನಾ ದಿನವೇ ಆಡಳಿತರೂಢ ಪಕ್ಷದ ಶಾಸಕರನ್ನು ಬಂಧಿಸಲಾಗಿದ್ದು, ಇಂದು ಬೆಳಗ್ಗೆ ವಿಚಾರಣೆಗಾಗಿ ಸರೋಜ್ ಮೆಹೆರ್ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪೊಲೀಸರು ಬಿಜೆಡಿ ಶಾಸಕನನ್ನು ಬಂಧಿಸಿದ್ದು, ಪ್ರತಾಪಗಢ್ ಉಪ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಇತ್ತೀಚಿಗೆ ಬೆಲ್ಪಡಾದಲ್ಲಿ ಪಟ್ನಾಗಢದ ಬಿಜೆಡಿ ಶಾಸಕ ಸರೋಜ್ ಮೆಹೆರ್ ಅವರು ಕಿರಿಯ ಇಂಜಿನಿಯರ್ ಜಯಕಾಂತ್ ಸಬರ್ ಅವರಿಗೆ ಬಸ್ಕಿ ಹೊಡೆಸಿ ವಿವಾದಕ್ಕೀಡಾಗಿದ್ದಾರೆ.
ಈ ದೃಶ್ಯವನ್ನು ಚಿತ್ರೀಕರಿಸಿದ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಜಯಕಾಂತ್ ಅವರ ಪತ್ನಿ ಶಾಸಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಆರೋಪಿ ಶಾಸಕನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos