ಟಿಜೆಎಸ್ ಜಾರ್ಜ್ 
ದೇಶ

ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಗೆ ಸ್ವದೇಶಾಭಿಮಾನಿ ಕೇಸರಿ ಪುರಸ್ಕಾರ

ಹಿರಿಯ ಪತ್ರಕರ್ತ ಮತ್ತು ಅಂಕಣಕಾರ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಅಂಕಣ ...

ತಿರುವನಂತಪುರಂ: ಹಿರಿಯ ಪತ್ರಕರ್ತ ಮತ್ತು ಅಂಕಣಕಾರ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಅಂಕಣ ಸಲಹೆಗಾರ ಟಿಜೆಎಸ್ ಜಾರ್ಜ್ ಅವರನ್ನು 2017ನೇ ಸಾಲಿನ ಸ್ವದೇಶಾಭಿಮಾನಿ ಕೇಸರಿ ಮಾಧ್ಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೇರಳ ಸರ್ಕಾರ ಹಿರಿಯ ಪತ್ರಕರ್ತರಿಗೆ ನೀಡುವ ಅತ್ಯುನ್ನತ ಗೌರವ ಇದಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜುಲೈ 1ರಂದು ಠಾಗೋರ್ ಥಿಯೇಟರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಮತ್ತು ಕನಯಿ ಕುನಿರಾಮನ್ ಅವರ ಮೂರ್ತಿಯನ್ನು ಒಳಗೊಂಡಿರುತ್ತದೆ. 
ಪಾರ್ವತಿ ದೇವಿ, ಎನ್ ಪಿ ರಾಜೇಂದ್ರನ್ ಮತ್ತು ಖ್ಯಾತ ಮಾಧ್ಯಮ ವಿಶ್ಲೇಷಕ ಸೆಬಾಸ್ಟಿಯನ್ ಪೌಲ್ ಅವರ ನೇತೃತ್ವದ ಆಯ್ಕೆ ಸಮಿತಿ ಟಿಜೆಎಸ್ ಜಾರ್ಜ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ತಮ್ಮ ಸುದೀರ್ಘ 70 ದಶಕಗಳ ಪತ್ರಿಕಾರಂಗ ವೃತ್ತಿಯಲ್ಲಿ ಟಿಜೆಎಸ್ ಜಾರ್ಜ್, ವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಮೊದಲ ಸಂಪಾದಕರಾಗಿದ್ದಾರೆ. ಇಂಗ್ಲಿಷ್ ಮತ್ತು ಮಲಯಾಳಂ ಭಾಷೆಗಳಲ್ಲಿ ಸುಮಾರು 20 ಪುಸ್ತಕಗಳನ್ನು ಬರೆದಿದ್ದಾರೆ. ಟಿಜೆಎಸ್ ಜಾರ್ಜ್ ಅವರಿಗೆ 2011 ರಲ್ಲಿ ಕೇಂದ್ರ ಸರ್ಕಾರದ ಪದ್ಮ ಭೂಷಣ ಪುರಸ್ಕಾರ ಸಂದಿದೆ.
ಟಿಜೆಎಸ್ ಜಾರ್ಜ್ ಅವರು ಪ್ರತಿ ಭಾನುವಾರ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಬರೆಯುವ ಪಾಯಿಂಟ್ ಆಫ್ ವ್ಯೂ ಅಂಕಣ ಜನಪ್ರಿಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT