ಟಿಜೆಎಸ್ ಜಾರ್ಜ್ 
ದೇಶ

ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಗೆ ಸ್ವದೇಶಾಭಿಮಾನಿ ಕೇಸರಿ ಪುರಸ್ಕಾರ

ಹಿರಿಯ ಪತ್ರಕರ್ತ ಮತ್ತು ಅಂಕಣಕಾರ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಅಂಕಣ ...

ತಿರುವನಂತಪುರಂ: ಹಿರಿಯ ಪತ್ರಕರ್ತ ಮತ್ತು ಅಂಕಣಕಾರ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಅಂಕಣ ಸಲಹೆಗಾರ ಟಿಜೆಎಸ್ ಜಾರ್ಜ್ ಅವರನ್ನು 2017ನೇ ಸಾಲಿನ ಸ್ವದೇಶಾಭಿಮಾನಿ ಕೇಸರಿ ಮಾಧ್ಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೇರಳ ಸರ್ಕಾರ ಹಿರಿಯ ಪತ್ರಕರ್ತರಿಗೆ ನೀಡುವ ಅತ್ಯುನ್ನತ ಗೌರವ ಇದಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜುಲೈ 1ರಂದು ಠಾಗೋರ್ ಥಿಯೇಟರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಮತ್ತು ಕನಯಿ ಕುನಿರಾಮನ್ ಅವರ ಮೂರ್ತಿಯನ್ನು ಒಳಗೊಂಡಿರುತ್ತದೆ. 
ಪಾರ್ವತಿ ದೇವಿ, ಎನ್ ಪಿ ರಾಜೇಂದ್ರನ್ ಮತ್ತು ಖ್ಯಾತ ಮಾಧ್ಯಮ ವಿಶ್ಲೇಷಕ ಸೆಬಾಸ್ಟಿಯನ್ ಪೌಲ್ ಅವರ ನೇತೃತ್ವದ ಆಯ್ಕೆ ಸಮಿತಿ ಟಿಜೆಎಸ್ ಜಾರ್ಜ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ತಮ್ಮ ಸುದೀರ್ಘ 70 ದಶಕಗಳ ಪತ್ರಿಕಾರಂಗ ವೃತ್ತಿಯಲ್ಲಿ ಟಿಜೆಎಸ್ ಜಾರ್ಜ್, ವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಮೊದಲ ಸಂಪಾದಕರಾಗಿದ್ದಾರೆ. ಇಂಗ್ಲಿಷ್ ಮತ್ತು ಮಲಯಾಳಂ ಭಾಷೆಗಳಲ್ಲಿ ಸುಮಾರು 20 ಪುಸ್ತಕಗಳನ್ನು ಬರೆದಿದ್ದಾರೆ. ಟಿಜೆಎಸ್ ಜಾರ್ಜ್ ಅವರಿಗೆ 2011 ರಲ್ಲಿ ಕೇಂದ್ರ ಸರ್ಕಾರದ ಪದ್ಮ ಭೂಷಣ ಪುರಸ್ಕಾರ ಸಂದಿದೆ.
ಟಿಜೆಎಸ್ ಜಾರ್ಜ್ ಅವರು ಪ್ರತಿ ಭಾನುವಾರ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಬರೆಯುವ ಪಾಯಿಂಟ್ ಆಫ್ ವ್ಯೂ ಅಂಕಣ ಜನಪ್ರಿಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT