ರಾಂಚಿ: ಬಸ್ಸೊಂದು ಕಮರಿಗೆ ಉರುಳಿಬಿದ್ದು ಆರು ಮಂದಿ ಸಾವನ್ನಪ್ಪಿ 39 ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ಗರ್ಹ್ವಾದಲ್ಲಿ ನಡೆದಿದೆ.
ಜಾರ್ಖಂಡ್ ನಿಂದ ಛತ್ತೀಸ್ ಘರ್ ಗೆ ತೆರಳುತ್ತಿದ್ದ ಬಸ್ ಕಮರಿಗೆ ಉರುಳಿಬಿದ್ದಿದೆ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ.
ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.