ಸ್ಥಳೀಯರು ತಬ್ರೆಜ್ ಗೆ ಹೊಡೆದಿರುವುದು 
ದೇಶ

ಜಾರ್ಖಂಡ್: ಥಳಿತಕ್ಕೊಳಗಾದ ಮುಸ್ಲಿಂ ಯುವಕ ಸಾವು, 11 ಮಂದಿ ಬಂಧನ

ಕಳ್ಳತನದ ಶಂಕೆ ಮೇಲೆ ಆಕ್ರೋಶಿತ ಗುಂಪಿನಿಂದ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದ 24 ವರ್ಷದ ಯುವಕ ಮೃತಪಟ್ಟಿದ್ದು ಘಟನೆ ಸಂಬಂಧ ...

ಸೆರೈಕೆಲಾ-ಖಾರ್ಸವಾನ್ (ಜಾರ್ಖಂಡ್): ಕಳ್ಳತನದ ಶಂಕೆ ಮೇಲೆ ಆಕ್ರೋಶಿತ ಗುಂಪಿನಿಂದ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದ 24 ವರ್ಷದ ಯುವಕ ಮೃತಪಟ್ಟಿದ್ದು ಘಟನೆ ಸಂಬಂಧ 11 ಮಂದಿಯನ್ನು ಬಂಧಿಸಲಾಗಿದೆ. 
ಜಾರ್ಖಂಡ್ ರಾಜ್ಯದ ಖಾರ್ಸಾವಾನ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಯುವಕನಿಗೆ ಥಳಿಸಿದ ಗುಂಪು ಒತ್ತಾಯಪೂರ್ವಕವಾಗಿ ಯುವಕನ ಕೈಯಲ್ಲಿ ಜೈ ಶ್ರೀರಾಮ್ ಮತ್ತು ಜೈ ಹನುಮಾನ್ ಎಂದು ಹೇಳಿಸುತ್ತಿರುವ ವಿಡಿಯೊ ಪೊಲೀಸರಿಗೆ ಸಿಕ್ಕಿದೆ.  ಕಳೆದ 18 ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತೀವ್ರ ಹಲ್ಲೆಗೀಡಾಗಿದ್ದ 24 ವರ್ಷದ ತಬ್ರೇಜ್ ಅನ್ಸಾರಿಯನ್ನು ಜಾರ್ಖಂಡ್ ನ ಜಮ್ಷೆಡ್ ಪುರದಲ್ಲಿನ ಟಾಟಾ ಮೈನ್ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದು ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ನೇಮಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಅವರು ಸಿನಿ ಮತ್ತು ಖಾರಸ್ವಾನ್ ಪೊಲೀಸ್ ಠಾಣೆಯ ಅಧಿಕಾರಿಗಳಾಗಿದ್ದಾರೆ. 
ಈ ಘಟನೆ  ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂದು ವಿಡಿಯೋದಲ್ಲಿ ತಬ್ರೇಜ್ ಗೆ ಮರದ ತುಂಡಿನಿಂದ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಮತ್ತೊಂದು ವಿಡಿಯೋದಲ್ಲಿ ಜೈ ರಾಮ್, ಜೈ ಹನುಮನ್ ಅಂತ ಹೇಳುವಂತೆ ಒತ್ತಾಯಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಶೀಘ್ರದಲ್ಲೇ ಯುದ್ಧ ಅಂತ್ಯ; ಸುಳಿವು ಕೊಟ್ಟ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

US-Iran Peace Talks: ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರೆದ ಉದ್ವಿಗ್ನತೆ; ಇರಾನ್‌-ಅಮೆರಿಕಾ ನಡುವೆ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಇದು ಅಪಾಯಕಾರಿ-ಬೇಜವಾಬ್ದಾರಿ ನಡೆ; ಅಮೆರಿಕಾ ವಿರುದ್ಧ ಚೀನಾ ಕಿಡಿ

ದೇಶದ ಹಿತಾಸಕ್ತಿಯೇ ಮುಖ್ಯ, ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..!

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

SCROLL FOR NEXT