ಪಂಚಾಯತ್ ರಾಜ್, ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಪರ್ಷೋತ್ತಮ್ ಖೋಡಭಾಯ್ ರೂಪಾಲ 
ದೇಶ

ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೇ, ಕಡ್ಡಾಯವಾಗಬೇಕೇ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ

ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ ಅಥವಾ ಕಡ್ಡಾಯಗೊಳಿಸಬೇಕೋ ಎಂಬುದರ ಕುರಿತು ಸಲಹೆ ...

ನವದೆಹಲಿ: ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ ಅಥವಾ ಕಡ್ಡಾಯಗೊಳಿಸಬೇಕೋ ಎಂಬುದರ ಕುರಿತು ಸಲಹೆ ನೀಡುವಂತೆ ರಾಜ್ಯಗಳಿಗೆ ಸೂಚಿಸಿರುವುದಾಗಿ ಸರ್ಕಾರ ಲೋಕಸಭೆಯಲ್ಲಿ ಮಂಗಳವಾರ ತಿಳಿಸಿದೆ. 
“ಬೆಳೆ ವಿಮೆ ಕುರಿತು ಸಲಹೆ ನೀಡುವಂತೆ ಸೂಚಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೋಮವಾರ ಪತ್ರ ಬರೆಯಲಾಗಿದ್ದು, ಬೇಡಿಕೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿ ಸರ್ಕಾರ ತೊಡಗಿದೆ” ಎಂದು ಪಂಚಾಯತ್ ರಾಜ್, ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಪರ್ಷೋತ್ತಮ್ ಖೋಡಭಾಯ್ ರೂಪಾಲ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದ್ದಾರೆ. 
ಬೆಳೆ ವಿಮೆಯು ದೊಡ್ಡ ಮಟ್ಟದ ಅಪಾಯವನ್ನು ತಗ್ಗಿಸುವ ಮೂಲ ರೈತರಿಗೆ ಲಾಭ ಒದಗಿಸಲಿದೆ. ಪ್ರಧಾನ ಮಂತ್ರಿಯವರ ಫಸಲ್ ಬಿಮಾ ಯೋಜನೆ ಅಥವಾ ಪುನರ್ ರಚಿತ ಹವಾಮಾನ ಆಧಾರಿತ ಬೆಲೆ ವಿಮೆ ಯೋಜನೆಯಲ್ಲಿ, ರೈತರು ನೀಡುವ ಪ್ರೀಮಿಯಂ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರೀಮಿಯಂ ಸಬ್ಸಿಡಿಯನ್ನು ಸಂಬಂಧಪಟ್ಟ ವಿಮಾ ಕಂಪನಿಗಳಿಗೆ ಪಾವತಿಸಲಾಗುತ್ತದೆ. ಅಪಾಯದ ಸಂದರ್ಭದಲ್ಲಿ ವಿಮಾ ಮೊತ್ತವನ್ನು ರೈತರಿಗೆ ಪಾವತಿಸಲಾಗುತ್ತದೆ. 
ಈ ಯೋಜನೆಯು ಸಾಲ ಪಡೆಯುವ ರೈತರಿಗೆ ಕಡ್ಡಾಯವಾಗಿದ್ದು, ಉಳಿದ ರೈತರು ಸ್ವಯಂ ತೀರ್ಮಾನ ಕೈಗೊಳ್ಳಬಹುದು. 
ಬೆಳೆ ವಿಮೆ ಮಾಡಿಸುವ ತೀರ್ಮಾನವನ್ನು ರೈತರ ಆಯ್ಕೆಗೆ ಬಿಡಬೇಕೇ ಹೊರತು, ಕಡ್ಡಾಯಗೊಳಿಸಬಾರದು ಎಂದು ರೈತ ಸಂಘಟನೆಗಳೂ ಸೇರಿದಂತೆ ವಿವಿಧ ವಿಭಾಗಗಳು ಮನವಿ ಮಾಡಿರುವುದಾಗಿ ಸಚಿವ ಪರ್ಷೋತ್ತಮ್ ಖೋಡಭಾಯ್ ರೂಪಾಲ ಲೋಕಸಭೆಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT