ನರೇಂದ್ರ ಸಿಂಗ್ ತೋಮರ್ 
ದೇಶ

ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255.5 ಕೋಟಿ ರೂ. ಬಿಡುಗಡೆ

ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿಯಲ್ಲಿ ದೇಶದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255. 5 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿಂದು ತಿಳಿಸಿದರು.

ನವದೆಹಲಿ:ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನದಡಿಯಲ್ಲಿ ದೇಶದಲ್ಲಿ  ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕೆ ಕೇಂದ್ರದಿಂದ 7255. 5 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಯಲ್ಲಿಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಪಂಚಾಯತ್ ರಾಜ್ ಸಂಸ್ಥೆಗಳ  ಸಬಲೀಕರಣದ ಮೂಲಕ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹಣಕಾಸು ನೆರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
7255.50 ಕೋಟಿ ಅಂದಾಜು ವೆಚ್ಚದೊಂದಿಗೆ  2018-19 ರಿಂದ 2021-22 ರವರೆಗೂ ನಾಲ್ಕು ವರ್ಷಗಳ ಅವಧಿಗಾಗಿ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.
ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣಕ್ಕಾಗಿ ಕಾರ್ಯಕ್ರಮ ಆಧಾರಿತ ಬೆಂಬಲವನ್ನು ಒದಗಿಸುತ್ತಿರುವ ಸಚಿವಾಲಯ, ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯ ವೃದ್ಧಿ ಹಾಗೂ  ಪಂಚಾಯತ್ ರಾಜ್ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ
ರಾಷ್ಟ್ರೀಯ ಗ್ರಾಮ ಸ್ವರಾಜ್ ಯೋಜನೆಯಡಿ ಸಾಮರ್ಥ್ಯ ವೃದ್ಧಿ ಮತ್ತು ತರಬೇತಿ, ಮಾನವ ಸಂಪನ್ಮೂಲ ಮತ್ತು ತರಬೇತಿ, ಗ್ರಾಮಸಭೆ ಸಬಲೀಕರಣ, ದೂರ ಸಂಪರ್ಕ, ತಾಂತ್ರಿಕ ಬೆಂಬಲ , ಆರ್ಥಿಕ ಅಭಿವೃದ್ಧಿ ಹಾಗೂ ಆದ್ವಾಯ ದ್ವಿಗುಣ ಮತ್ತಿತರ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ  ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT