ಸಾಂದರ್ಭಿಕ ಚಿತ್ರ 
ದೇಶ

27 ವರ್ಷಗಳ ಹಳೆಯ ಪ್ರಕರಣ: ಕಾಶ್ಮೀರದಲ್ಲಿ ಹಿರಿಯ ಪತ್ರಕರ್ತನ ಬಂಧನ

ಹಿರಿಯ ಪತ್ರಕರ್ತ ಗುಲಾಮ್ಜೀಲಾನಿ ಖಾದ್ರಿ ಅವರನ್ನು ಮಂಗಳವಾರ ಶ್ರೀನಗರದ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶ್ರೀನಗರ: ಹಿರಿಯ ಪತ್ರಕರ್ತ ಗುಲಾಮ್ಜೀಲಾನಿ ಖಾದ್ರಿ ಅವರನ್ನು ಮಂಗಳವಾರ ಶ್ರೀನಗರದ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.
27 ವರ್ಷಗಳ ಹಿಂದೆ 1992ರಲ್ಲಿ ಟಾಡಾ ಕಾಯ್ದೆಯಡಿ ದಾಖಾಲಾಗಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಲವು ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟನಡೆಸುತ್ತಿದ್ದಾರೆ. ಶ್ರೀನಗರದಿಂದ ಪ್ರಕಟಗೊಳ್ಳುವ ಅತ್ಯಂತ ಹಳೆಯ ಉರ್ದು ಪತ್ರಿಕೆ “ಡೈಲಿ ಆಫಾಕ್”ನ ಪ್ರಕಾಶಕ ಮತ್ತು ಮುದ್ರಣಕಾರರಾಗಿರುವ ಖಾದ್ರಿ (62) ಅವರ ಮನೆಯ ಮೇಲೆ ದಾಳಿ ನಡೆಸಿದ ಅವರನ್ನು ಬಂಧಿಸಲಾಗಿದೆ.
90ರ ದಶಕದ ಆರಂಭದಲ್ಲಿ ಜೆಎಕೆ(ಜಮ್ಮು ಮತ್ತು ಕಾಶ್ಮೀರ) ಸುದ್ದಿಸಂಸ್ಥೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದಲ್ಲಿ ಟಾಡಾ ಕಾಯ್ದೆ ಜಾರಿಯಲ್ಲಿದ್ದಾಗ ಟಾಡಾ ನ್ಯಾಯಾಲಯ 1990 ವಾರೆಂಟ್ ಹೊರಡಿಸಿತ್ತು. ನಂತರ 1995 ರಲ್ಲಿ ಕಾಯ್ದೆಯನ್ನು ರದ್ದುಪಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT