ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ್: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ!

ಉತ್ತರಾಖಂಡ್ ಸರ್ಕಾರ, ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಜಾರಿಗೆ ತಂದಿದ್ದು, ಈ ಸಂಬಂಧ...

ಡೆಹ್ರಾಡೂನ್: ಉತ್ತರಾಖಂಡ್ ಸರ್ಕಾರ, ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಜಾರಿಗೆ ತಂದಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಿದೆ. ಅಲ್ಲದೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ಅರ್ಹತೆ ನಿಗದಿ ಮಾಡಿದೆ.
ನಿನ್ನೆ 2016ರ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡಿಸಿದ್ದ ಉತ್ತರಾಖಂಡ್ ಸರ್ಕಾರ, ಇಂದು ಪ್ರತಿಪಕ್ಷಗಳ ವಿರೋಧದ ನಡುವೆಯೂ ಆ ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಉತ್ತರಾಖಂಡದಲ್ಲಿ ಕೆಲವೇ ತಿಂಗಳಲ್ಲಿ ಪಂಚಾಯತ್ ಚುನಾವಣೆ ನಡೆಯುತ್ತಿದ್ದು, ಅದಕ್ಕೂ ಮುನ್ನವೇ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವ ಸಾಧ್ಯತೆ ಇದೆ.
ಕುಟುಂಬ ಯೋಜನೆಗೆ ಉತ್ತೇಜನ ನೀಡುವುದಕ್ಕಾಗಿ ಮತ್ತು ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ನಿರ್ಧರಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮದನ್ ಕೌಶಿಕ್ ಅವರು ಹೇಳಿದ್ದಾರೆ.
ಪಂಚಾಯತಿ ರಾಜ್ ಕಾಯ್ದೆಯ ತಿದ್ದುಪಡಿ ಮಸೂದೆ ಜಾರಿಗೆ ಬಂದರೆ  ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಅಭ್ಯರ್ಥಿ ಯಾವುದೇ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ಅಲ್ಲದೆ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸ ಬಯಸುವ ಅಭ್ಯರ್ಥಿ ನಿರ್ದಿಷ್ಟ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT