ರಾಷ್ಟ್ರೀಯ ಹಿತಾಸಕ್ತಿಗೆ ಅಗತ್ಯವಾಗಿದ್ದನ್ನು ಮಾಡುತ್ತೇವೆ: ಎಸ್-400 ಖರೀದಿ ಕುರಿತು ಯುಎಸ್ ಗೆ ಭಾರತದ ದೃಢ ಸಂದೇಶ 
ದೇಶ

ರಾಷ್ಟ್ರೀಯ ಹಿತಾಸಕ್ತಿಗೆ ಅಗತ್ಯವಿರುವುದನ್ನು ಮಾಡ್ತೀವಿ: ಎಸ್-400 ಖರೀದಿ ಬಗ್ಗೆ ಯುಎಸ್ ಗೆ ಭಾರತದ ದೃಢ ಸಂದೇಶ

ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪಿಯೊ ಅವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಯಶಸ್ವಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪಿಯೊ ಅವರೊಂದಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಯಶಸ್ವಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 
ಮಾತುಕತೆ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಜೈಶಂಕರ್, ರಷ್ಯಾದಿಂದ S-400 ಕ್ಷಿಪಣಿ ವ್ಯವಸ್ಥೆ ಖರೀದಿಸುವುದಕ್ಕೆ ಅಮೆರಿಕ ನಿರ್ಬಂಧ ಅಡ್ಡಿ ಬರುತ್ತದೆಯೇ ಎಂಬ ಪ್ರಶ್ನೆಗೂ ಉತ್ತರಿಸಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದು ಅಮೆರಿಕಾಗೆ ಹೇಳಿರುವುದಾಗಿ ತಿಳಿಸಿದ್ದಾರೆ. 
ಭಾರತ ಬೇರೆ ರಾಷ್ಟ್ರಗಳೊಂದಿಗೆ ವ್ಯವಹರಿಸುವಾಗ ತನ್ನ ಹಿತಾಸಕ್ತಿಗೆ ಅನುಗುಣವಾಗಿ ನಡೆದುಕೊಳ್ಳುತ್ತದೆ. ಭಾರತ ಹಲವು ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದಿದೆ. ಅದಕ್ಕೆ ಅದರದ್ದೇ ಆದ ಇತಿಹಾಸವೂ ಇದೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗೆ ಅಗತ್ಯವಾಗಿದ್ದನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ.
ಅಮೆರಿಕ-ಭಾರತ ಕಾರ್ಯತಂತ್ರ ಪಾಲುದಾರಿಕೆ ಆಳವಾಗಿದ್ದು, ಭಾರತ ಅಮೆರಿಕ ವಿದೇಶಾಂಗ ಸಚಿವರೊಂದಿಗೆ ಇಂಧನ, ವ್ಯಾಪಾರ, ಇಂಡೋ ಪೆಸಿಫಿಕ್ ಪ್ರದೇಶ, ಅಫ್ಘಾನಿಸ್ಥಾನದ ಪರಿಸ್ಥಿತಿ ಸೇರಿದಂತೆ ಹಲವು ಮುಖ್ಯ ವಿಷಯಗಳೊಂದಿಗೆ ಚರ್ಚೆ ನಡೆಸಿದೆ ಎಂದು ಹೇಳಿದ್ದಾರೆ. 
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಟ್ರಂಪ್ ಆಡಳಿತ ಬೆಂಬಲ ನೀಡಿರುವುದಕ್ಕೆ ಜೈಶಂಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ ಮೈಕ್ ಪೊಂಪಿಯೊ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT