ಭದ್ರತಾ ಪಡೆಗಳು 
ದೇಶ

ಜಮ್ಮು-ಕಾಶ್ಮೀರ: ಟ್ರಾಲ್ ಬಳಿ ಕಾರ್ಯಾಚರಣೆ,ಅನ್ಸಾರ್ ಗಜಾವತುಲ್ ಹಿಂದ್ ಉಗ್ರನ ಹತ್ಯೆ

ಅನ್ಸಾರ್ ಗಜಾವತುಲ್ ಹಿಂದ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಉಗ್ರನನ್ನು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಚರಣೆಯಲ್ಲಿ ಹತ್ಯೆ ಮಾಡಲಾಗಿದೆ.

ಶ್ರೀನಗರ : ಅನ್ಸಾರ್ ಗಜಾವತುಲ್ ಹಿಂದ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಉಗ್ರನನ್ನು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಚರಣೆಯಲ್ಲಿ ಹತ್ಯೆ ಮಾಡಲಾಗಿದೆ. 
ರಾಷ್ಟ್ರೀಯ ರೈಫಲ್ಸ್, ಜಮ್ಮು ಕಾಶ್ಮೀರದ ವಿಶೇಷ ಜಂಟಿ ಕಾರ್ಯಾಚರಣೆ ತಂಡ ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಬ್ರನ್‌ಪಥೇರಿ, ಟ್ರಾಲ್ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿವೆ.ಭದ್ರತಾ ಪಡೆ ನಿರ್ದಿಷ್ಟ ಪ್ರದೇಶದತ್ತ ಪ್ರವೇಶಿಸುತ್ತಿದ್ದಾಗ ಅಡಗಿದ್ದ ಉಗ್ರರು ಹಠಾತ್ ದಾಳಿ ನಡೆಸಿದ್ದು ಭದ್ರತಾ ಪಡೆ  ತಕ್ಕ ಪ್ರತ್ಯುತ್ತರ ನೀಡಿದೆ. 
ಮೃತ ಉಗ್ರನನ್ನು ಟ್ರಾಲ್ ಪ್ರದೇಶದ ನಿವಾಸಿ ಶಬೀರ್ ಮಲ್ಲಿಕ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT