ಸಾಂದರ್ಭಿಕ ಚಿತ್ರ 
ದೇಶ

ಜೀತ ಕಾರ್ಮಿಕರ ಪುನರ್ವಸತಿಗೆ ಮೀಸಲಾದ ಹಣ ಶೇ 61 ರಷ್ಟು ಕಡಿತಗೊಳಿಸಿದ ಮೋದಿ ಸರ್ಕಾರ

ದೇಶಾದ್ಯಂತ ರಕ್ಷಿಸಲ್ಪಟ್ಟ ಜೀತದಾಳುಗಳ ಪುನರ್ವಸತಿ ಮಾಡಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲದ್ದು ...

ನವದೆಹಲಿ: ದೇಶಾದ್ಯಂತ ರಕ್ಷಿಸಲ್ಪಟ್ಟ ಜೀತದಾಳುಗಳ ಪುನರ್ವಸತಿ ಮಾಡಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲದ್ದು ಒಂದೆಡೆಯಾದರೆ ಅವರ ಪುನರ್ವಸತಿಗೆ ಬಿಡುಗಡೆ ಮಾಡುವ ಹಣವನ್ನು ಶೇಕಡಾ 61ರಷ್ಟು ಈ ವರ್ಷ ಕಡಿತಗೊಳಿಸಲಾಗಿದೆ ಎಂದು ಕಾರ್ಮಿಕ ಸಚಿವಾಲಯದ ಇತ್ತೀಚಿನ ಅಂಕಿಅಂಶ ಹೇಳುತ್ತದೆ.
ಜೀತ ಕಾರ್ಮಿಕರ ಪುನರ್ವಸತಿಗೆ ಬಿಡುಗಡೆಯಾದ ಒಟ್ಟು ಮೊತ್ತ 2017-18ರಲ್ಲಿ 664.5 ಲಕ್ಷವಾದರೆ ಕಳೆದ ವರ್ಷ ಆ ಮೊತ್ತ 253.3 ಲಕ್ಷ ಹಠಾತ್ ಆಗಿ ಇಳಿದಿದೆ.
ಒಟ್ಟು 3.13 ಲಕ್ಷ ಜೀತ ಕಾರ್ಮಿಕರಲ್ಲಿ 2.93 ಲಕ್ಷ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಆದರೆ ಸುಮಾರು 19 ಸಾವಿರ ಜೀತ ಕಾರ್ಮಿಕರನ್ನು ಗುರುತಿಸಲಾಗದೆ ಅವರಿಗೆ ಪುನರ್ವಸತಿ ಕಲ್ಪಿಸಲಾಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ಹೇಳುತ್ತಾರೆ. ಕೆಲವು ಕಾರ್ಮಿಕರು ಸತ್ತಿರಬಹುದು ಅಥವಾ ಪುನರ್ವಸತಿ ಕೇಂದ್ರವನ್ನು ಬಿಟ್ಟು ಹೋಗಿರಬಹುದು, ಅವರ ವಿಳಾಸ ಪತ್ತೆಯಾಗಿಲ್ಲ, ಇಂತಹ ಕಾರ್ಮಿಕರ ಸಂಖ್ಯೆ ದೇಶದಲ್ಲಿ ಸುಮಾರು 19,599ರಷ್ಟಿದೆ ಎಂದು ಸಚಿವಾಲಯ ಅಧಿಕಾರಿಗಳು ಹೇಳುತ್ತಾರೆ.
ಅಸ್ಸಾಂ, ಗುಜರಾತ್, ಪುದುಚೆರಿ, ಜಾರ್ಖಂಡ್, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜೀತದಾಳುಗಳನ್ನು ಶೇಕಡಾ 100ರಷ್ಟು ಪುನರ್ವಸತಿ ಕಲ್ಪಿಸಲಾಗಿದೆ. ಆದರೆ ಹರ್ಯಾಣದಲ್ಲಿ ಪರಿಸ್ಥಿತಿ ಶೋಚನೀಯವಾಗಿದ್ದು ಇಲ್ಲಿನ ಒಟ್ಟು 594 ಜೀತದಾಳುಗಳಲ್ಲಿ ಕೇವಲ 92 ಜೀತದಾಳುಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT