ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಸತ್ ಅನುಮೋದನೆ 
ದೇಶ

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಸತ್ ಅನುಮೋದನೆ

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆ ಬುಧವಾರ ಒಪ್ಪಿಗೆ ಸೂಚಿಸುವ ಮೂಲಕ ಸಂಸತ್ತಿನ ಅನುಮೋದನೆ ಪಡೆದಂತಾಗಿದೆ.

ನವದೆಹಲಿ: ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ  ರಾಜ್ಯಸಭೆ  ಬುಧವಾರ ಒಪ್ಪಿಗೆ ಸೂಚಿಸುವ ಮೂಲಕ  ಸಂಸತ್ತಿನ  ಅನುಮೋದನೆ ಪಡೆದಂತಾಗಿದೆ.

ಸಿಪಿಐ (ಎಂ)  ಸದಸ್ಯ ಟಿ.ಕೆ. ರಂಗರಾಜನ್ ಹಾಗೂ ಸಿಪಿಐ ಸದಸ್ಯ ಡಿ. ರಾಜಾ ಅವರು ಸೂಚಿಸಿದ ತಿದ್ದುಪಡಿಗಳನ್ನು  ಸದನ ತಿರಸ್ಕರಿಸಿದ ನಂತರ ನಿರ್ಣಯವನ್ನು ರಾಜ್ಯಸಭೆ ಧ್ವನಿಮತದ ಮೂಲಕ ಅಂಗೀಕರಿಸಿತು. ಲೋಕಸಭೆ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಮಂಗಳವಾರ ಅನುಮೋದಿಸಿತು.

ಇದಕ್ಕೂ ಮುನ್ನ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, ಸಾರ್ವತ್ರಿಕ ಚುನಾವಣೆ  ಸೋಲಿಗೆ ಇವಿ ಎಂ ಗಳನ್ನು ಹೊಣೆ ಮಾಡುತ್ತಿರುವ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಸ್ವತಃ ತಮ್ಮ ಮೇಲೆ ವಿಶ್ವಾಸವಿಲ್ಲದವರು ವಿದ್ಯುನ್ಮಾನ ಮತಯಂತ್ರಗಳನ್ನು ದೂರುತ್ತಾರೆ ಎಂದು  ದೂರಿದರು.  ವಿಪಕ್ಷಗಳು ತಮ್ಮ ಸೋಲನ್ನು ಇವಿಎಂ ಹೆಸರಿನಲ್ಲಿ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಮೋದಿ, ರಾಜ್ಯಸಭೆಯಲ್ಲಿ ಹಾಜರಿರುವ ಅನೇಕ ಪಕ್ಷಗಳಿಗೆ ಇವಿಎಂ ಮೂಲಕ ನಡೆದ ಚುನಾವಣೆಯಲ್ಲಿ ವಿವಿಧ ರಾಜ್ಯಗಳಲ್ಲಿ ಸರ್ಕಾರ ರಚಿಸುವ ಅವಕಾಶ ದೊರೆತಿದೆ. ಆದರೆ, ಈಗ ಏಕೆ ಇವಿಎಂ ಕುರಿತು ಪ್ರಶ್ನೆ ಎತ್ತುತ್ತಿವೆ ಎಂದು ಪ್ರಶ್ನಿಸಿದರು. ಈ ಹಿಂದೆ ಇವಿಎಂ ಕುರಿತ ಆರೋಪಗಳ ಚರ್ಚೆಗೆ ಚುನಾವಣಾ ಆಯೋಗ ಎಲ್ಲಾ ಪಕ್ಷಗಳ ಪ್ರತಿನಿಧಿಗಳನ್ನು ಆಹ್ವಾನಿಸಿದಾಗ, ಕೇವಲ ಸಿಪಿಐ ಹಾಗೂ ಎನ್ ಸಿ ಪಿ ಪಕ್ಷಗಳ ನಾಯಕರು ಆಗಮಿಸಿದ್ದರು. ಉಳಿದವರು ಏಕೆ ಹೋಗಲಿಲ್ಲ ಎಂಬುದಕ್ಕೆ ಅವರೇ ಉತ್ತರ ನೀಡಬೇಕು ಎಂದರು.  

‘ಒಂದು ದೇಶ ಒಂದು ಚುನಾವಣೆ’  ಪರಿಕಲ್ಪನೆಯನ್ನು  ವಿರೋಧಿಸು ವಿಪಕ್ಷಗಳ ವಿರುದ್ಧ ಕಿಡಿಕಾರಿದ ಮೋದಿ, ಈ ವಿಷಯದಲ್ಲಿ ಕೂಡ ವಿಪಕ್ಷಗಳು ಹಳೆಯ ಧೋರಣೆಯನ್ನೇ ಮುಂದುವರಿಸುತ್ತಿವೆ. ಕೆಲವರಿಗೆ ಈ ನೀತಿ ಇಷ್ಟವಾಗದಿರಬಹುದು. ಆದರೆ, ಆ ಕುರಿತು ತಮ್ಮ ಅನಿಸಿಕೆ ಮಂಡಿಸಿ ಚರ್ಚೆಗೆ ಸಹಕರಿಸಬೇಕು. ಚುನಾವಣೆಯಲ್ಲಿ ಸುಧಾರಣೆಗಳು ನಿರಂತರ ಪ್ರಕ್ರಿಯೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT