ತರೂರ್, ತಿವಾರಿ ಮನವೊಲಿಕೆ ಯತ್ನ ವಿಫಲ: ರಾಹುಲ್ ರಾಜೀನಾಮೆ ನಿಲುವು ಅಚಲ! 
ದೇಶ

ತರೂರ್, ತಿವಾರಿ ಮನವೊಲಿಕೆ ಯತ್ನ ವಿಫಲ: ರಾಹುಲ್ ರಾಜೀನಾಮೆ ನಿಲುವು ಅಚಲ!

ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರಕ್ಕೆ ರಾಹುಲ್ ಗಾಂಧಿ ಬದ್ಧರಾಗಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರಕ್ಕೆ ರಾಹುಲ್ ಗಾಂಧಿ ಬದ್ಧರಾಗಿದ್ದಾರೆ. 
ಪಕ್ಷದ ಅಧ್ಯಕ್ಷ ಹುದ್ದೆ ತ್ಯಜಿಸದಂತೆ ಹಿರಿಯ ನಾಯಕರಾದ ಮನೀಷ್ ತಿವಾರಿ, ಶಶಿ ತರೂರ್ ಮನವೊಲಿಕೆ ಯತ್ನ ವಿಫಲಗೊಂಡಿದ್ದು, ತಮ್ಮ ನಿರ್ಧಾರ ಅಚಲವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಅಧ್ಯಕ್ಷ ಹುದ್ದೆಯಲ್ಲೇ ಮುಂದುವರೆಯುವಂತೆ ತರೂರ್, ತಿವಾರಿ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿದ ಮನವಿಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ್ದಾರೆ. 
ಇದೇ ವೇಳೆ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆಯಾದ ಎನ್ಎಸ್ ಯುಐ ಸಹ ರಾಹುಲ್ ಗಾಂಧಿ ತಮ್ಮ ನಿರ್ಧಾರವನ್ನು ಬದಲಿಸಬೇಕೆಂದು ಪಟ್ಟು ಹಿಡಿದು ರಾಹುಲ್ ಗಾಂಧಿ ನಿವಾಸದೆದುರು ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. 
ಲೋಕಸಭಾ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ರಾಹುಲ್ ಗಾಂಧಿ ಮೇ.25 ರಂದು ಘೋಷಿಸಿದ್ದರು. ಆದರೆ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆಯನ್ನು ಅವಿರೋಧವಾಗಿ ತಿರಸ್ಕರಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT