ಸಮಂತ್ ಗೋಯೆಲ್ 
ದೇಶ

ಬಾಲಕೋಟ್ ಸ್ಟ್ರೈಕ್‌ನಲ್ಲಿ ಪ್ರಧಾನ ಪಾತ್ರ ವಹಿಸಿದ ಸಮಂತ್ ಗೋಯೆಲ್ ನೂತನ ರಾ ಮುಖ್ಯಸ್ಥ

ಪಾಕ್ ವಿರುದ್ಧ ಭಾರತ ನಡೆಸಿದ್ದ 2016 ರ ಸರ್ಜಿಕಲ್ ಸ್ಟ್ರೈಕ್ ಹಾಗೂ ಈ ವರ್ಷದ ಬಾಲಕೋಟ್ ಸ್ಟ್ರೈಕ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐಪಿಎಸ್ ಅಧಿಕಾರಿ ಸಮಂತ್ ಗೋಯೆಲ್....

ಪಾಕ್ ವಿರುದ್ಧ ಭಾರತ ನಡೆಸಿದ್ದ 2016 ರ ಸರ್ಜಿಕಲ್ ಸ್ಟ್ರೈಕ್ ಹಾಗೂ ಈ ವರ್ಷದ  ಬಾಲಕೋಟ್ ಸ್ಟ್ರೈಕ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ  ಐಪಿಎಸ್ ಅಧಿಕಾರಿ ಸಮಂತ್ ಗೋಯೆಲ್ ಅವರನ್ನು ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ನ ಮುಂದಿನ ಮುಖ್ಯಸ್ಥರಾಗಿ ನೇಮಕ ಮಾಡಿ ಅದೇಶ ಹೊರಡಿಸಲಾಗಿದೆ.
ಸಮಂತ್ ಗೋಯೆಲ್ ಪಂಜಾಬ್ ಕೇಡರ್ನ 1984 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದಾರೆ.ಇವರು ಪ್ರಸ್ತುತ ರಾ ನ ಕಾರ್ಯಾಚರಣಾ ಮುಖ್ಯಸ್ಥರಾಗಿದ್ದಾರೆ.
1984 ರ ಬ್ಯಾಚ್‌ನ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ.ಅರವಿಂದ್ ಕುಮಾರ್ ಅವರನ್ನು ಗುಪ್ತಚರ ಬ್ಯೂರೋದ (ಐಬಿ) ಹೊಸ ನಿರ್ದೇಶಕರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಪ್ರಸ್ತುತ ರಾ ಮುಖ್ಯಸ್ಥ ಅನಿಲ್ ಧಾಸ್ಮಾನಾ ಮತ್ತು ಈಗಿನ ಐಬಿ ಮುಖ್ಯಸ್ಥ ರಾಜೀವ್ ಜೈನ್ ಅವರ ಅಧಿಕಾರಾವಧಿ ತಿಂಗಳಾಂತ್ಯಕ್ಕೆ ಕೊನೆಯಾಗಲಿದೆ. ಆ ನಂತರ ಸಮಂತ್ ಹಾಗೂ ಅರವಿಂದ್ ಕ್ರಮವಾಗಿ ಆಯಾ ವಿಭಾಗಗಳ ಆಡಳಿತ ವಹಿಸಿಕೊಳ್ಲಲಿದ್ದಾರೆ. ಡಿಸೆಂಬರ್ 2016 ರಲ್ಲಿ ಧಾಸ್ಮಾನಾ  ಹಾಗೂ ಜೈನ್  ಅವರನ್ನು ರಾ ಹಾಗೂ ಐಬಿ ಮುಖ್ಯರನ್ನಾಗಿ ಸರ್ಕಾರ ನೇಮಕ ಮಾಡಿತ್ತು ಕಳೆದ ಡಿಸೆಂಬರ್ 2018 ರಲ್ಲಿ ಅವರ ಅಧಿಕಾರಾವಧಿಯನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿತ್ತು.
ಐಬಿ ಯಲ್ಲಿ ಎಡಪಂಥೀಯ ಉಗ್ರವಾದವನ್ನು ನಿಭಾಯಿಸುವಲ್ಲಿ ಕುಮಾರ್ ಅನುಭವಿಯಾಗಿದ್ದಾರೆಯಲ್ಲದೆ ಅವರು ಕಾಶ್ಮೀರ ವಿಷಯ ತಜ್ಞರೂ ಹೌದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT