ನವದೆಹಲಿ: ಕರ್ನಾಟಕದ ಯುವಕರಿಗೆ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗ ಸಿಗಬೇಕು. ಅವರಿಗೆ ಅನ್ಯಾಯವಾಗದಂತಹ ರೀತಿಯಲ್ಲಿ 2014ಕ್ಕೆ ಮುಂಚಿನ ಅಧಿಸೂಚನೆಯಂತೆ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.
ಸಾರ್ವಜನಿಕ ಮಹತ್ವಕ್ಕೆ ಸಂಬಂಧಿಸಿದ ವಿಷಯಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ತೇಜಸ್ವಿ ಸೂರ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು, ಕರ್ನಾಟಕದಲ್ಲಿ ಬಿಜೆಪಿಗೆ 25 ಸ್ಥಾನಗಳನ್ನು ನೀಡಲಾಗಿದೆ. ಇಲ್ಲಿನ ಯುವಕರಿಗೆ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಂದಾಗಬೇಕೆಂದು ಮನವಿ ಮಾಡಿಕೊಂಡರು.
2014ರಲ್ಲಿ ಬ್ಯಾಂಕಿಂಗ್ ನೇಮಕಾತಿಗೆ ಸಂಬಂಧಿಸಿದ ಹೊರಡಿಸಿದ ಅಧಿಸೂಚನೆಯಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸರ್ ಸ್ಕೇಲ್ 1 ಹಾಗೂ ಆಫೀಸ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಸ್ಥಳೀಯ ಭಾಷೆಯಲ್ಲಿ ಪರಿಣತಿ ಹೊಂದಿರಬೇಕೆಂದು ಕಡ್ಡಾಯ ಮಾಡಲಾಗಿತ್ತು ಎಂದು ತಿಳಿಸಿದರು.
ಆದಾಗ್ಯೂ, 2014ರ ನಂತರ ಈ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಭಾಷೆ ಅಗತ್ಯವಿಲ್ಲ,ಪರಿಣತಿ ಪಡೆಯುವ ಅವಧಿಯನ್ನು ಆರು ವರ್ಷಗಳಿಂದ 1 ವರ್ಷಕ್ಕೆ ವಿಸ್ತರಿಸಲಾಗುತ್ತದೆ. ಇದರಿಂದಾಗಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಯುವಕರು ಉದ್ಯೋಗ ಪಡೆಯದಂತಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics