ಪೆಹ್ಲೂ ಖಾನ್ 
ದೇಶ

ಅಳ್ವಾರ್ ಹಲ್ಲೆ ಪ್ರಕರಣ: ಮೃತ ಪೆಹ್ಲು ಖಾನ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿಲ್ಲ, ವರದಿ ತಪ್ಪು ಎಂದ ರಾಜಸ್ಥಾನ ಸಿಎಂ

ಎರಡು ವರ್ಷಗಳ ಹಿಂದೆ ರಾಜಸ್ಥಾನದ ಅಳ್ವಾರ್ ನಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ವಿರುದ್ಧ ಗೋ ಕಳ್ಳಸಾಗಣೆ ಆರೋಪದಡಿ...

ಜೈಪುರ್: ಎರಡು ವರ್ಷಗಳ ಹಿಂದೆ ರಾಜಸ್ಥಾನದ ಅಳ್ವಾರ್ ನಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾಗಿ ಮೃತಪಟ್ಟ ಪೆಹ್ಲೂ ಖಾನ್ ವಿರುದ್ಧ ಗೋ ಕಳ್ಳಸಾಗಣೆ ಆರೋಪದಡಿ ರಾಜಸ್ಥಾನ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿಲ್ಲ ಎಂದು ಶನಿವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಶೋಕ್ ಗೆಹ್ಲೋಟ್ ಅವರು ಪೆಹ್ಲೂ ಖಾನ್ ಹಾಗೂ ಆತನ ಮಕ್ಕಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂಬ ಮಾಧ್ಯಮಗಳ ವರದಿ ತಪ್ಪು ಎಂದು ಹೇಳಿದ್ದಾರ.
ಇದಕ್ಕು ಮುನ್ನ ಈ ಹಿಂದಿನ ಬಿಜೆಪಿ ಸರ್ಕಾರ ಅಳ್ವಾರ್ ಹಲ್ಲೆ ಪ್ರಕರಣದ ತನಿಖೆ ನಡೆಸಿದೆ. ಆದರೆ ತನಿಖೆಯಲ್ಲಿ ಲೋಪದೋಷ ಕಂಡುಬಂದರೆ ಮರು ತನಿಖೆ ನಡೆಸುವುದಾಗಿ ರಾಜಸ್ಥಾನ ಸಿಎಂ ತಿಳಿಸಿದ್ದರು.
ಕಾಂಗ್ರೆಸ್ ಪಕ್ಷ ಪೆಹ್ಲೂ ಖಾನ್ ಹತ್ಯೆಯನ್ನು ಮೊದಲಿನಿಂದಲೂ ಖಂಡಿಸುತ್ತಾ ಬಂದಿದೆ. ಖಾನ್ ಹಂತಕರಿಗೆ ಶಿಕ್ಷೆಯಾಗಲೇಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಪ್ರಕರಣದ ತನಿಖೆ ನಡೆದಿದೆ ಮತ್ತು ಈಗ ಪೆಹ್ಲೂ ಖಾನ್ ಅವರ ಪುತ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಂದು ವೇಳೆ ತನಿಖೆ ಅಸಮಂಜಸವಾಗಿದ್ದರೆ ನಮ್ಮ ಸರ್ಕಾರ ಮರು ತನಿಖೆ ನಡೆಸಲಿದೆ ಎಂದು ರಾಜಸ್ಥಾನ ಸಿಎಂ ವರದಿಗಾರರಿಗೆ ಹೇಳಿದ್ದರು.
ಮೃತ ಪೆಹ್ಲೂ ಖಾನ್ ಮತ್ತು ಆತನ ಇಬ್ಬರು ಗಂಡು ಮಕ್ಕಳ ವಿರುದ್ಧ ಗೋ ಕಳ್ಳಸಾಗಣೆ ಆರೋಪದಡಿ ರಾಜಸ್ಥಾನ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT