ಆಕಾಶ್ ವಿಜಯ್ ವರ್ಗೀಯ 
ದೇಶ

ಅಧಿಕಾರಿ ಮೇಲೆ ಬ್ಯಾಟ್‌ನಿಂದ ಹಲ್ಲೆ: ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯಾಗೆ ಜಾಮೀನು

ಮಹಾನಗರ ಪಾಲಿಕೆ ಅಧಿಕಾರಿಯ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್‌ ವಿಜಯ್‌ ವರ್ಗೀಯ...

ಭೋಪಾಲ್: ಮಹಾನಗರ ಪಾಲಿಕೆ ಅಧಿಕಾರಿಯ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಿಜೆಪಿ ಹಿರಿಯ ನಾಯಕ ಕೈಲಾಶ್‌ ವಿಜಯ್‌ ವರ್ಗೀಯ ಅವರ ಪುತ್ರ, ಬಿಜೆಪಿ ಶಾಸಕ ಆಕಾಶ್‌ ವಿಜಯ್‌ ವರ್ಗೀಯ ಅವರಿಗೆ ಭೋಪಾಲ್ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜೂನ್ 26ರಂದು ಇಂದೋರ್ ನಲ್ಲಿ ಪಾಲಿಕೆ ಅಧಿಕಾರಿ ಮೇಲೆ ಬ್ಯಾಟ್ ನಿಂದ ಹಲ್ಲೆ ನಡೆಸಿದ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರನ್ನು ಪೊಲೀಸರು ಬಂಧಿಸಿದ್ದರು.
ಜಾಮೀನು ಕೋರಿ ಆಕಾಶ್ ವಿಜಯ್ ವರ್ಗೀಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, 50 ಸಾವಿರ ರೂ. ಬಾಂಡ್ ಮೇಲೆ ಆರೋಪಿಗೆ ಜಾಮೀನು ನೀಡಿದೆ.
ಶಾಸಕ, ಅಧಿಕಾರಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಆಕಾಶ್ ವಿಜಯ್ ವರ್ಗೀಯ ಮತ್ತು ಇತರೆ 10 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಇಂದೋರ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಆಕಾಶ್‌ ಅವರು, ತಮ್ಮ ಬೆಂಬಲಿಗನೋರ್ವನ ಕಟ್ಟಡ ಕೆಡವಲು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಕಟ್ಟಡ ಕೆಡವದಂತೆ ಆಕಾಶ್‌ ಆಜ್ಞೆ ನೀಡಿದರೂ, ಮಾತು ಕೇಳದೇ ಇದ್ದ ಅಧಿಕಾರಿ ವಿರುದ್ಧ ಕೆಂಡಾಮಂಡಲರಾದ ಶಾಸಕರು, ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT