ಸಂಗ್ರಹ ಚಿತ್ರ 
ದೇಶ

ಜಾಗ್ವಾರ್ ವಿಮಾನಕ್ಕೆ ಹಕ್ಕಿ ಡಿಕ್ಕಿ: ಜೀವವನ್ನೇ ಪಣಕ್ಕಿಟ್ಟು ಬಾಂಬ್, ಇಂಧನ ಟ್ಯಾಂಕ್ ಕೆಳಗೆ ಬೀಳಿಸಿದ ಪೈಲಟ್, ವಿಡಿಯೋ!

ಬಾಂಬ್ ಗಳನ್ನು ಹೊತ್ತು ಸಾಗುತ್ತಿದ್ದ ಜಾಗ್ವಾರ್ ಯುದ್ಧ ವಿಮಾನಕ್ಕೆ ಹಕ್ಕಿಗಳು ಡಿಕ್ಕಿ ಹೊಡೆದ ಪರಿಣಾಮ ಯುವ ಪೈಲಟ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸಂಭವಿಸಬೇಕಿದ್ದ ದೊಡ್ಡ ದುರಂತವನ್ನು ತಡೆದಿದ್ದಾರೆ.

ನವದೆಹಲಿ: ಬಾಂಬ್ ಗಳನ್ನು ಹೊತ್ತು ಸಾಗುತ್ತಿದ್ದ ಜಾಗ್ವಾರ್ ಯುದ್ಧ ವಿಮಾನಕ್ಕೆ ಹಕ್ಕಿಗಳು ಡಿಕ್ಕಿ ಹೊಡೆದ ಪರಿಣಾಮ ಯುವ ಪೈಲಟ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸಂಭವಿಸಬೇಕಿದ್ದ ದೊಡ್ಡ ದುರಂತವನ್ನು ತಡೆದಿದ್ದಾರೆ.
ಭಾರತೀಯ ವಾಯುಸೇನೆಗೆ ಸೇರಿದ ಜಾಗ್ವಾರ್ ಯುದ್ಧ ವಿಮಾನ ಅಂಬಾಲಾ ವಾಯುನೆಲೆಯಿಂದ ಆಗಸಕ್ಕೆ ಹಾರಿತ್ತು. ಈ ವೇಳೆ ಹಕ್ಕಿಗಳ ಗುಂಪು ಡಿಕ್ಕಿ ಹೊಡೆದ ಪರಿಣಾಮ ಎರಡು ಇಂಜಿನ್ ಗಳ ಪೈಕಿ ಒಂದು ಇಂಜಿನ್ ಸ್ಥಗಿತಗೊಂಡಿದೆ. ಇದನ್ನು ಅರಿತ ಪೈಲಟ್ ಕೂಡಲೇ ವಿಮಾನದಲ್ಲಿದ್ದ ಹೆಚ್ಚುವರಿ ಎರಡು ಇಂಧನ ಟ್ಯಾಂಕ್ ಮತ್ತು ಪ್ರ್ಯಾಕ್ಟೀಸ್ ಬಾಂಬ್ ಗಳನ್ನು ನೆಲಕ್ಕೆ ಎಸೆದು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.
ವಿಮಾನ ಸ್ಫೋಟಗೊಳ್ಳುತ್ತದೆ ಎಂದು ಪೈಲಟ್ ಏನಾದರೂ ಹೆದರಿ ವಿಮಾನದಿಂದ ಹೊರಕ್ಕೆ ಹಾರಿದ್ದರೆ ವಿಮಾನ ವಾಯುನೆಲೆಯ ಪಕ್ಕದಲ್ಲಿದ್ದ ಮನೆಗಳ ಮೇಲೆ ಬೀಳುವ ಸಾಧ್ಯತೆ ಇತ್ತು. ಅಲ್ಲದೆ ಸ್ಫೋಟಕಗಳು ತುಂಬಿಕೊಂಡಿದ್ದರಿಂದ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತೇನೋ. ಆದರೆ ಅದ್ಭುತ ಕಾರ್ಯಕ್ಷಮತೆ, ವೃತ್ತಿಪರತೆಯಿಂದ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.
ಇನ್ನು ಸಾಹಸ ಪ್ರದರ್ಶಿಸಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿದ ಪೈಲಟ್ ಅನ್ನು ವಾಯುಸೇನೆ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದಿಟ್ಟು ಮೂವರು ಸೋದರಿಯರು ಆತ್ಮಹತ್ಯೆ-Video

ಹೊಸ ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ, ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್ Video

ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆ, MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು, ಇದೇನಿದು ಹರಿಪ್ರಸಾದ್ ಆರೋಪ?

ಹಿಂದೂ ಧರ್ಮ, ಹಿಂದೂಗಳು, ಹಿಂದೂಗಳ ಆಚರಣೆಗಳು ಅಂದರೆ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ಅಸಡ್ಡೆ? ಯಾಕಿಷ್ಟು ದ್ವೇಷ?

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

SCROLL FOR NEXT