ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ 
ದೇಶ

ಆರೋಗ್ಯ ಸಚಿವಾಲಯ ಸಭೆಗಳಲ್ಲಿ ಕೇವಲ ಆರೋಗ್ಯಕರ ತಿನಿಸು, ಇನ್ಮುಂದೆ ಬಿಸ್ಕೆಟ್ ಇಲ್ಲ: ಸಚಿವರ ಆದೇಶ!

ತಮ್ಮ ಸಚಿವಾಲಯ ಆವರಣದಲ್ಲಿ ಬಿಸ್ಕೆಟ್ ಗಳ ಮಾರಾಟಕ್ಕೆ ನಿಷೇಧ ಹೇರಿರುವ ಕೇಂದ್ರ ಆರೋಗ್ಯ...

ನವದೆಹಲಿ: ತಮ್ಮ ಸಚಿವಾಲಯ ಆವರಣದಲ್ಲಿ ಬಿಸ್ಕೆಟ್ ಗಳ ಮಾರಾಟಕ್ಕೆ ನಿಷೇಧ ಹೇರಿರುವ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್, ಸಚಿವಾಲಯದ ಸಭೆಗಳಲ್ಲಿ ಅಧಿಕಾರಿಗಳಿಗೆ ಮತ್ತು ಅತಿಥಿಗಳಿಗೆ ಕಡಲೆ, ಬಾದಾಮಿ, ಖರ್ಜೂರ ಮತ್ತು ವಾಲ್ನಟ್ ನಂತಹ ಆರೋಗ್ಯಕರ ತಿನಿಸುಗಳನ್ನು ಮಾತ್ರ ನೀಡಬೇಕೆಂದು ಆದೇಶಿಸಿದ್ದಾರೆ.
ಈ ಕುರಿತು ನಿನ್ನೆ ಆದೇಶ ಹೊರಡಿಸಿರುವ ಅವರು, ಅಧಿಕಾರಿಗಳ ಸಭೆಗಳಲ್ಲಿ ಕೇವಲ ಆರೋಗ್ಯಕರ ಸ್ನಾಕ್ಸ್ ಗಳನ್ನು ಮಾತ್ರ ನೀಡಬೇಕು, ಬಿಸ್ಕೆಟ್, ಚಿಪ್ಸ್ ನಂತಹ ತಿನಿಸುಗಳನ್ನು ನೀಡಬಾರದು ಎಂದು ಹೇಳಿದ್ದಾರೆ.
ಇನ್ನು ಮುಂದೆ ಸಭೆಗಳಲ್ಲಿ ಇಲಾಖೆಯ ಕ್ಯಾಂಟೀನ್ ಮೂಲಕ ಬಿಸ್ಕತ್ತುಗಳನ್ನು ನೀಡಲಾಗುವುದಿಲ್ಲ. ಚನ್ನದಾಲ್, ಖರ್ಜೂರ, ಹುರಿದ ಕಡಲೆ, ಬಾದಾಮಿ, ಅಕ್ರೋಟ್ ನಂತಹ ಆರೋಗ್ಯಕರ ತಿನಿಸುಗಳನ್ನು ಪೂರೈಸಲಾಗುವುದು ಎಂದು ಹೇಳಿದೆ. ಅಲ್ಲದೆ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ನೀರು ಸಹ ವಿತರಣೆ ಮಾಡುವುದಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT