ಆಕಾಶ್ ವಿಜಯವರ್ಗಿಯಾ 
ದೇಶ

ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ಪ್ರಕರಣ: ಮಧ್ಯಪ್ರದೇಶ ಬಿಜೆಪಿ ಶಾಸಕನಿಗೆ ಜಾಮೀನು

ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಬಂಧಿತನಾಗಿದ್ದ ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ವಿಜಯವರ್ಗಿಯಾ ಅವರನ್ನು ಭಾನುವಾರ ಬೆಳಿಗ್ಗೆ ಸ್ಥಳೀಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಇಂದೋರ್: ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಬಂಧಿತನಾಗಿದ್ದ ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ವಿಜಯವರ್ಗಿಯಾ ಅವರನ್ನು ಭಾನುವಾರ ಬೆಳಿಗ್ಗೆ ಸ್ಥಳೀಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಭೋಪಾಲ್‌ನ ನ್ಯಾಯಾಲಯದಿಂದ ಜಾಮೀನು ಆದೇಶ ಇಂದೋರ್ ಗೆ ಲುಪಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ.
ಭೋಪಾಲ್ ಮೂಲದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸುರೇಶ್ ಸಿಂಗ್ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಪುತ್ರ ಶಾಸಕ ಆಕಾಶ್ ಅವರ ಮೇಲೆ ಹಲ್ಲೆ ಹಾಗೂ ಕಾನೂನುಬಾಹಿರ ಪ್ರತಿಭಟನೆ ನಡೆಸಿದ ಆರೋಪ ಇತ್ತು. ಇದೀಗ ಈ ಪ್ರಕರಣದಲ್ಲಿ ಜಾಮೀನು ದೊರಕಿದೆ.
ಹಲ್ಲೆ ಪ್ರಕರಣದ ಸಂಬಂಧ 50,000 ರೂ.ಗಳ ವೈಯಕ್ತಿಕ ಬಾಂಡ್ ಹಾಗೂ ಇನ್ನಿತರೆ ಪ್ರಕರಣಗಳಲ್ಲಿ 20,000 ರೂ.ಬಾಂಡ್ ನೀಡಿ ಜಾಮೀನು ಪಡೆಯಲಾಗಿದೆ.
ಇಂದೋರ್ -3 ಅಸೆಂಬ್ಲಿ ವಿಭಾಗವನ್ನು ಪ್ರತಿನಿಧಿಸುವ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಆಕಾಶ್ ವಿಜಯವರ್ಗಿಯಾ (34) ಕಳೆದ ಬುಧವಾರ ಪುರಸಭೆ ಅಧಿಕಾರಿ ಧಿರೇಂದ್ರ ಸಿಂಗ್ ಬೈಸ್ ಅವರ ಮೇಲೆ  ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದು ಇದು ಟಿವಿ ಕ್ಯಾಮರಾಗಳಲ್ಲಿಯೂ ಸೆರೆಯಾಗಿತ್ತು.  ಶಿಥಿಲಗೊಂಡಿದ್ದ ಮನೆಯೊಂದನ್ನು ನೆಲಸಮ ಮಾಡುವುದಕ್ಕೆ ಶಾಸಕ ಆಕಾಶ್ ವಿರೋಧಿಸಿ ಈ ಕೃತ್ಯ ಎಸಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಾಸಗಿ ಫೋನ್ ಕಂಪನಿಯ ಉದ್ಯೋಗಸ್ಥರು ವಾರ್ಷಿಕ ಸಭೆಗೆಂದು ವಿಯೆಟ್ನಾಂಗೆ ತೆರಳಿದ್ದಾಗ ದುರಂತ: ಪ್ರಧಾನಿ ಮೋದಿ ಸಂತಾಪ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್