ತೃಣಮೂಲ ಕಾಂಗ್ರೆಸ್ ಸಂಸದಾರ ಮಿಮಿ ಚಕ್ರವರ್ತಿ ಮತ್ತು ನುಸ್ರತ್ ಜಹಾನ್ ಸಂಸತ್ತಿನ ಆವರಣದಲ್ಲಿ ತೆಗೆಸಿಕೊಂಡ ಫೋಟೋ 
ದೇಶ

ಎಲ್ಲರನ್ನೂ ಒಳಗೊಂಡ ಭಾರತವನ್ನು ನಾನು ಪ್ರತಿನಿಧಿಸುತ್ತಿದ್ದೇನೆ: ಸಂಸದೆ ನುಸ್ರತ್ ಜಹಾನ್ ಪ್ರತಿಕ್ರಿಯೆ

ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕಾರದ ವೇಳೆ ತಮ್ಮ ಧರ್ಮದ ಬುರ್ಖಾ ತೊಡದೆ ಸಿಂಧೂರ ಮತ್ತು ...

ಕೋಲ್ಕತ್ತಾ: ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕಾರದ ವೇಳೆ ತಮ್ಮ ಧರ್ಮದ ಬುರ್ಖಾ ತೊಡದೆ ಸಿಂಧೂರ ಮತ್ತು ಬಳೆಗಳನ್ನು ಉಟ್ಟು ಸೀರೆ ತೊಟ್ಟಿದ್ದಕ್ಕೆ ಫತ್ವಾ ಹೊರಡಿಸಿರುವ ಬಗ್ಗೆ ನಟಿ ಹಾಗೂ ರಾಜಕಾರಣಿ ನುಸ್ರತ್ ಜಹಾನ್ ಪ್ರತಿಕ್ರಿಯೆ ನೀಡಿದ್ದು, ತಾನು ಎಲ್ಲರನ್ನೂ ಒಳಗೊಂಡ ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಎಂದಿದ್ದಾರೆ.
ಎಲ್ಲರನ್ನೂ ಒಳಗೊಂಡ ವೈವಿಧ್ಯತೆಯ ಭಾರತವನ್ನು ನಾನು ಪ್ರತಿನಿಧಿಸುತ್ತಿದ್ದೇನೆ. ಅದು ಜಾತಿ, ಧರ್ಮ, ಮತಗಳ ಅಡೆತಡೆಗಳನ್ನು ಮೀರಿದ್ದಾಗಿದೆ ಎಂದು ಜಹಾನ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ತಾವು ಎಲ್ಲಾ ಧರ್ಮವನ್ನು ಗೌರವಿಸುತ್ತೇನೆ ಎಂದು ನುಸ್ರತ್ ಜಹಾನ್ ಹೇಳಿದ್ದಾರೆ.
ನಾನು ಇನ್ನೂ ಮುಸ್ಲಿಂ ಧರ್ಮಕ್ಕೆ ಸೇರಿದವಳಾಗಿದ್ದು, ನಾನು ಏನು ಧರಿಸಬೇಕು ಎಂದು ಬೇರೆಯವರು ನನಗೆ ಹೇಳಬೇಕಾಗಿಲ್ಲ. ನಂಬಿಕೆ ಉಡುಪನ್ನು ಮೀರಿದ್ದಾಗಿದೆ. ಎಲ್ಲಾ ಧರ್ಮಗಳ ಅಮೂಲ್ಯವಾದ ಸಿದ್ಧಾಂತಗಳನ್ನು ನಂಬುವ ಮತ್ತು ಅಭ್ಯಾಸ ಮಾಡುವ ಬಗ್ಗೆಯಾಗಿದೆ ಎಂದು ಜಹಾನ್ ಹೇಳಿದ್ದಾರೆ.
ನುಸ್ರತ್ ಜಹಾನ್ ಮದುವೆಯಾಗಿದ್ದು ಜೈನ್ ಧರ್ಮಕ್ಕೆ ಸೇರಿದ ನಿಖಿಲ್ ಜೈನ್ ಎಂಬುವವರನ್ನು. ಮದುವೆ ನಂತರ ನುಸ್ರತ್ ಜಹಾನ್ ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕಾರದ ವೇಳೆ ಹಿಂದೂ ಧರ್ಮದ ವೇಷ-ಭೂಷಣ ತೊಟ್ಟಿದ್ದರು. ಇದಕ್ಕೆ ಮುಸ್ಲಿಂ ಮೌಲ್ವಿಗಳು ಫತ್ವಾ ಹೊರಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!