ಶ್ರೀನಗರ: ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೋರ್ವ ಹತನಾಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಯೋಧರು ಇಂದು ಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ.
ಭಾರತೀಯ ಯೋಧರನ್ನು ಕಂಡ ಕ್ಷಣ ಉಗ್ರರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದರು. ಸದ್ಯ ಉಗ್ರನೋರ್ವ ಮೃತಪಟ್ಟಿದ್ದು ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಭಾರತೀಯ ಯೋಧರು ವಶಪಡಿಸಿಕೊಂಡಿದ್ದಾರೆ.