ತಾಯ್ನಾಡಿಗೆ ಮರಳಿದ ವೀರ ಯೋಧ ಅಭಿನಂದನ್ 
ದೇಶ

ಅಭಿನಂದನ್ ಬಿಡುಗಡೆಯಾಯ್ತು, ಮುಂದೇನು..?; ಸೇನೆಯ ಹಸ್ತಾಂತರ ಪ್ರಕ್ರಿಯ ಮಾಹಿತಿ ಇಲ್ಲಿದೆ!

ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವೀರಯೋಧ ವಿಂಡ್ ಕಮಾಂಡರ್ ಅಭಿನಂದನ್ ಅವರ ಬಿಡುಗಡೆಯಾಗಿದ್ದು, ಬಿಡುಗಡೆಯ ಬಳಿಕದ ಕೆಲ ಹಸ್ತಾಂತರ ಪ್ರಕ್ರಿಯೆಗಳನ್ನು ಅವರು ಪೂರ್ಣಗೊಳಿಸಲಿದ್ದಾರೆ.

ನವದೆಹಲಿ: ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವೀರಯೋಧ ವಿಂಡ್ ಕಮಾಂಡರ್ ಅಭಿನಂದನ್ ಅವರ ಬಿಡುಗಡೆಯಾಗಿದ್ದು, ಬಿಡುಗಡೆಯ ಬಳಿಕದ ಕೆಲ ಹಸ್ತಾಂತರ ಪ್ರಕ್ರಿಯೆಗಳನ್ನು ಅವರು ಪೂರ್ಣಗೊಳಿಸಲಿದ್ದಾರೆ.
ಭಾರತದ ವೀರಯೋಧ ಅಭಿನಂದನ್ ವರ್ತಮಾನ್ ರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿದೆಯಾದರೂ, ಇನ್ನೂ ಕೆಲ ದಿನಗಳ ಕಾಲ ಅಭಿನಂದನ್ ರಹಸ್ಯವಾಗಿರಲಿದ್ದಾರೆ. ಭಾರತೀಯ ಸೇನಾಪಡೆಗಳು ಅಭಿನಂದನ್ ರನ್ನು ತಮ್ಮಲ್ಲಿಯೇ ಉಳಿಸಿಕೊಂಡು ಅವರು ಪಾಕಿಸ್ತಾನದಲ್ಲಿ ಕಳೆದ ಅಷ್ಟೂ ಸಮಯ ಮತ್ತು ಪಾಕ್ ಅಧಿಕಾರಿಗಳ ವಿಚಾರಣೆ ಕುರಿತು ಅಭಿನಂದನ್ ರನ್ನು ಪ್ರಶ್ನೆ ಮಾಡಲಿದ್ದಾರೆ.
ಈ ಬಗ್ಗೆ ಸೇನಾ ಮೂಲಗಳು ಮಾಹಿತಿ ನೀಡಿದ್ದು, ಪಾಕಿಸ್ತಾನ ಅಭಿನಂದನ್ ರನ್ನು ಭಾರತಕ್ಕೆ ಹಸ್ತಾತಂತರಿಸಿದ ನಂತರ ವಾಯುಸೇನೆ ಅಧಿಕಾರಿಗಳು ಅವರನ್ನು ವಾಯುಸೇನೆಯ ಗುಪ್ತಚರ ಘಟಕಕ್ಕೆ ಕರೆದೊಯ್ಯುತ್ತಾರೆ. ಈ ವೇಳೆ ಸಾಕಷ್ಟು ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ದೇಹದಲ್ಲಿ ಯಾವುದಾದರೂ ಟ್ರ್ಯಾಕಿಂಗ್​ ಡಿವೈಸ್​ಗಳನ್ನು ಅಳವಡಿಸಲಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಸ್ಕ್ಯಾನಿಂಗ್​ ನಡೆಯಲಿದೆ. 
ಅಭಿನಂದನ್​ ಕೇವಲ ದೈಹಿಕವಾಗಿ ಮಾತ್ರವಲ್ಲದೇ ಅವರನ್ನು ಮಾನಸಿಕವಾಗಿಯೂ ಪರೀಕ್ಷೆ ಮಾಡಲಾಗುತ್ತದೆಯಂತೆ. ಅಭಿನಂದನ್​ ವೈರಿ ರಾಷ್ಟ್ರದಲ್ಲಿ ಏಕಾಂಗಿಯಾಗಿದ್ದರು. ಭಾರತದ ಭದ್ರತಾ ರಹಸ್ಯಗಳನ್ನು ಹೇಳುವಂತೆ ಅಲ್ಲಿನ ಅಧಿಕಾರಿಗಳು ಒತ್ತಡ ಹೇರಿರುವ ಸಾಧ್ಯತೆ ಇರುತ್ತದೆ. ಹಾಗಾಗಿ, ಈ ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಬಂಧನದಲ್ಲಿದ್ದಾಗ ಪಾಕಿಸ್ತಾನ ಯಾವ ರೀತಿಯ ಮಾಹಿತಿಗಳನ್ನು ಕೇಳಿತ್ತು. ಅದರಲ್ಲಿ ಯಾವ ಪ್ರಶ್ನೆಗಳಿಗೆ ಇವರು ಉತ್ತರ ನೀಡಿದರು ಎನ್ನುವ ಬಗ್ಗೆ ಅಭಿನಂದನ್​ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಿರುತ್ತದೆ. ಮಾಹಿತಿ ಸಂಗ್ರಹಣೆಗೆ ವೈರಿ ರಾಷ್ಟ್ರದವರು ತನ್ನನ್ನು ನೇಮಕ ಮಾಡಿಕೊಂಡಿಲ್ಲ ಎಂಬ ಖಾತ್ರಿಯನ್ನು ಅಭಿನಂದನ್​ ವಾಯುಸೇನೆ ಅಧಿಕಾರಿಗಳಿಗೆ ನೀಡಬೇಕು. ಇದು ಬೇಸರದ ಸಂಗತಿಯಾದರೂ, ದೇಶದ ಭದ್ರತಾ ಹಿತದೃಷ್ಟಿಯಿಂದ ಅನಿವಾರ್ಯದ ಪ್ರಕ್ರಿಯೆಯಾಗಿರುತ್ತದೆ.
ಅಭಿನಂದನ್​ ಭಾರತಕ್ಕೆ ವಾಪಸ್ಸಾದ ನಂತರ ಗುಪ್ತಚರ ಇಲಾಖೆಗೆ ಅಥವಾ ರಾ​ ಸಂಸ್ಥೆಗೆ ಅವರನ್ನು ಹಸ್ತಾಂತರ ಮಾಡುವ ಸಾಧ್ಯತೆಯೂ ಇದೆ. ಈ ಮೊದಲು ವೈರಿ ರಾಷ್ಟ್ರಗಳಿಂದ ಬಂಧನಕ್ಕೊಳಗಾದವರನ್ನು ಐಬಿ ಹಾಗೂ ರಾ ಸಂಸ್ಥೆಗಳು ತನಿಖೆ ನಡೆಸಿದ ಉದಾಹರಣೆಗಳಿವೆ. ಆದರೆ, ಈ ಪ್ರಕರಣಗಳದಲ್ಲೂ ಹಾಗೆಯೇ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT