ವಾಘಾ ಗಡಿ 
ದೇಶ

ಭಾರತದ ವೀರಪುತ್ರ ಅಭಿನಂದನ್ ಕೆಲವೇ ಕ್ಷಣದಲ್ಲಿ ತಾಯ್ನಾಡಿಗೆ ಆಗಮನ, ಮುಗಿಲು ಮುಟ್ಟಿದ ಸಂಭ್ರಮ

ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಶುಕ್ರವಾರ ವಾಘಾ ಗಡಿ ಪ್ರದೇಶದ ಮೂಲಕ ಬಾರತಕ್ಕೆ ಹಿಂದಿರುಗಲಿದ್ದಾರೆ. ಲಾಹೋರ್ ನಿಂದ 22 ಕಿಮೀ ದೂರದ ಅಟಾರಿ, ವಾಘಾ ಗಡಿಯಲ್ಲಿ....

 ನವದೆಹಲಿ: ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಶುಕ್ರವಾರ ವಾಘಾ ಗಡಿ ಪ್ರದೇಶದ ಮೂಲಕ ಬಾರತಕ್ಕೆ ಹಿಂದಿರುಗಲಿದ್ದಾರೆ. ಲಾಹೋರ್ ನಿಂದ 22 ಕಿಮೀ ದೂರದ ಅಟಾರಿ, ವಾಘಾ ಗಡಿಯಲ್ಲಿ ಪಾಕಿಸ್ತಾನವು ಅಭಿನಂದನ್ ಅವರನ್ನು ಭಾರತೀಯ ವಾಯುಸೇನೆಗೆ ಹಸ್ತಾಂತರಿಸಲಿದೆ.
ಮೊದಲಿಗೆ ಪಾಕ್ ರೇಂಜರ್ಸ್‌ಗಳಿಗೆ ಅಭಿನಂದನ್ ಹಸ್ತಾಂತರ  ಆಗಲಿದ್ದು ಬಳಿಕ ಅವರನ್ನು ಅಮೃತಸರಕ್ಕೆ ಕರೆದೊಯ್ಯಲಾಗುವುದು. ಇದಾಗಲೇ ಪಾಕಿಸ್ತಾನದಿಂದ ಅಭಿನಂದನ್ ಹಸ್ತಾಂತರ ಪ್ರಕ್ರಿಯೆ ಮುಕ್ತಾಯವಾಗಿದೆ.
ಇನ್ನು ಕೆಲವೇ ಕ್ಷಣಗಳಲ್ಲಿ ಅಭಿನಂದನ್ ವಾಘಾ ತಲುಪಲಿದ್ದು ಸ್ಥಳದಲ್ಲಿ ಐಎಎಫ್ ಅಧಿಕಾರಿಗಳು ಸೇರಿ ಅನೇಕ ದೇಶಾಭಿಮಾನಿಗಳು ದೇಶದ ಹೆಮ್ಮೆಯ ಪುತ್ರನ ಆಗಮನಕ್ಕೆ ಕಾತುರದಿಂದ ಕಾಯ್ತುತ್ತಿದ್ದಾರೆ.
ಒಮ್ಮೆ ಅಭಿನಂದನ್ ಅವರು ಭಾರತಕ್ಕೆ ಆಗಮಿಸಿದ ನಂತರ ಅಮೃತಸರಕ್ಕೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಆ ನಂತರ ಐಎಫ್ಎಫ್  ವಿಮಾನದ ಮೂಲಕ ನವದೆಹಲಿಗೆ ಕರೆದೊಯ್ಯಲಾಗುವುದು. ಇದಾಗಲೇ ಚೆನ್ನೈನಿಂದ ದೆಹಲಿಗೆ ಅಭಿನಂದನ್ ಪೋಷಕರು ತಲುಪಿದ್ದಾರೆ.
ಅಭಿನಂದನ್ ಅವರ ಆಗಮನದ ಹಿನ್ನೆಲೆಯಲ್ಲಿ ವಾಘಾ ಗಡಿಯಲ್ಲಿ ಪ್ರತಿನಿತ್ಯ ನಡೆಯುತ್ತಿದ್ದ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮವನ್ನು ಶುಕ್ರವಾರ ರದ್ದುಪಡಿಸಲಾಗಿದೆ.
ವಾಘಾ ಗಡಿಯಲ್ಲಿ ಅಭಿನಂದನ್ ಅವರ ಸ್ವಾಗತಕ್ಕೆ ಆಗಮಿಸಬೇಕಾಗಿದ್ದ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಾರಣಾಂತರದಿಂದ ಬರಲಾಗಲಿಲ್ಲ. ಅದಕ್ಕಾಗಿ ಅವರು ಟ್ವಿಟ್ ಮೂಲಕ ತಮ್ಮ ಶುಭಾಶಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT