ಅಮಿತ್ ಶಾ 
ದೇಶ

ಪುಲ್ವಾಮಾ ಉಗ್ರರ ದಾಳಿ ಬಗ್ಗೆ ಇಮ್ರಾನ್ ಖಾನ್ ಏಕೆ ಮೌನವಾಗಿದ್ದಾರೆ? ಅಮಿತ್ ಶಾ ಪ್ರಶ್ನೆ

ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಖಂಡಿಸಿಲ್ಲ, ಹೀಗಿರುವಾಗ ಅವರನ್ನು ನಾವು ಹೇಗೆ ನಂಬುವುದು ಎಂದು ಬಿಜೆಪಿ ....

ನವದೆಹಲಿ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ  ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್  ಖಂಡಿಸಿಲ್ಲ, ಹೀಗಿರುವಾಗ ಅವರನ್ನು ನಾವು ಹೇಗೆ ನಂಬುವುದು ಎಂದು  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿಯ ಬಿಜೆಪಿ ಸಮಾವೇಶದಲ್ಲಿ  ಮಾತನಾಡಿದ  ಅಮಿತ್ ಶಾ, ಭಯೋತ್ಪಾದನೆಯ ಹಿಂದೆ ನಿಂತಿರುವವರಿಗೆ ಮೋದಿ ಸರ್ಕಾರ ಸಿಂಹಸ್ವಪ್ನದಂತಿದ್ದು, ಪಾಕ್ ಮೂಲದ ಭಯೋತ್ಪಾದಕರಿಗೆ ಭಯ ಮೂಡಿಸುತ್ತಿದೆ ಎಂದು ಹೇಳಿದ್ದಾರೆ.
ಸ್ವತಂತ್ರ್ಯ ನಂತರ ಭಾರತದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವಲ್ಲಿ ನಮ್ಮ ಸರ್ಕಾರ ಉತ್ತಮ ಟ್ರ್ಯಾಕ್ ರೆಕಾರ್ಡ್ ಮಾಡಿದೆ, ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ  ಅತಿ ಹೆಚ್ಚಿನ ಸಂಖ್ಯೆಯ ಉಗ್ರರನ್ನು ನಾಶ ಮಾಡಲಾಗಿದೆ, ಆದರೆ ಪುಲ್ವಾಮ ಉಗ್ರರ ದಾಳಿಯನ್ನು ಪಾಕಿಸ್ತಾನ ಪ್ರಧಾನಿ ಏಕೆ ಖಂಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೊನೆ ಪಕ್ಷ ಕನಿಷ್ಠ ಒಂದು ಬಾರಿಯಾದರೂ ಪುಲ್ವಾಮ ದಾಳಿಯನ್ನು ಖಂಡಿಸಬೇಕಿತ್ತು,  ಆದರೆ ಅದನ್ನು ಅವರು ಮಾಡಿಲ್ಲ, ಹೀಗಿರುವಾಗ ಅವರನ್ನು ನಾವು ಹೇಗೆ ನಂಬುವುದು, ಬಹುಶ ಪರಿಸ್ಥಿತಿ ಅವರ ನಿಯಂತ್ರಣದಲ್ಲಿಲ್ಲವೇನೋ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT