ವಿಕೆ ಸಿಂಗ್ 
ದೇಶ

ಉಗ್ರರ ವಿರುದ್ಧ ಪಾಕಿಸ್ತಾನ ಹೆಚ್ಚಿನ ರೀತಿಯಲ್ಲಿ ಹೋರಾಡಬೇಕಾದ ಅಗತ್ಯವಿದೆ- ವಿಕೆ ಸಿಂಗ್

ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಹೆಚ್ಚಿನ ರೀತಿಯಲ್ಲಿ ಹೋರಾಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಸೇನಾ ಮುಖ್ಯಸ್ಥ ವಿ. ಕೆ. ಸಿಂಗ್ ಹೇಳಿದ್ದಾರೆ.

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಸ್ವದೇಶಕ್ಕೆ ವಾಪಾಸ್ ಆಗುತ್ತಿರುವುದು ಸಂತಸದ ವಿಷಯವಾಗಿದೆ. ಆದರೆ, ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಹೆಚ್ಚಿನ ರೀತಿಯಲ್ಲಿ ಹೋರಾಡಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಸೇನಾ ಮುಖ್ಯಸ್ಥ ವಿ. ಕೆ. ಸಿಂಗ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ರಿಕ್ತ ಪರಿಸ್ಥಿತಿ ಸಂಬಂಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆಯ ಆದರೆ, ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದರು.

ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಾಸ್ ಆಗುತ್ತಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದಾಗ್ಯೂ, ಪಾಕಿಸ್ತಾನ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಮೊದಲು ಕ್ರಮ ಕೈಗೊಳ್ಳಬೇಕಾಗಿದೆ. ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಜಿನಿವಾ ಒಪ್ಪಂದದ ಪ್ರಕಾರ ಪರಿಸ್ಥಿತಿ ಬಿಗಡಾಯಿಸಿದ ಸಂದರ್ಭದಲ್ಲಿ ಸೆರೆ ಸಿಕ್ಕ ಯೋಧನನ್ನು ವಾಪಾಸ್ ಸ್ವದೇಶಕ್ಕೆ ಕಳುಹಿಸಬೇಕಾಗಿದೆ. ಇದನ್ನು ಅರ್ಥಮಾಡಿಕೊಂಡಿರುವ ಪಾಕಿಸ್ತಾನ ಅಭಿನಂದನ್ ಹಿಂದಕ್ಕೆ ಕಳುಹಿಸದೆ ಏನು ಮಾಡಲು ಸಾಧ್ಯವಿಲ್ಲ. 1971ರ ಮಾಡಿಕೊಂಡ ಜಿನಿವಾ ಒಪ್ಪಂದವನ್ನು ನಾವು ಮರೆಯಬಾರದು, ನಾವು ಪಾಕಿಸ್ತಾನದ 90 ಸಾವಿರ ಪಾಕಿಸ್ತಾನದವರನ್ನು ಬಿಡುಗಡೆ ಮಾಡಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇಸ್ಲಾಮಿಕ್ ಸಹಕಾರ ಸಂಘಟನೆ ಆಯೋಜಿಸಿದ್ದ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳದ ಪಾಕಿಸ್ತಾನ ವಿದೇಶಾಂಗ ಸಚಿವರ ನಡೆ ಅವರು ಏನು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ ಎಂದರು.
ಭಾರತೀಯ ವಾಯುಪಡೆ ದಾಳಿ ಕುರಿತಂತೆ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ವಿ. ಕೆ. ಸಿಂಗ್ , ಏನೂ ಕೆಲಸ ಇಲ್ಲದೆ ಅನೇಕ ಜನರು ಇದ್ದಾರೆ. ಆ ಸಾಲಿನಲ್ಲಿ ಮಮತಾ ಕೂಡಾ ಸೇರಿದ್ದಾರೆ. ಸೇನೆ ಎಲ್ಲಾ ಅಂಶಗಳನ್ನು ನೀಡಲಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT