ಸಂಗ್ರಹ ಚಿತ್ರ 
ದೇಶ

ಅಭಿನಂದನ್ ಸ್ವದೇಶಕ್ಕೆ ವಾಪಾಸ್ : ನಮ್ಮ ರಾಜತಾಂತ್ರಿಕತೆಗೆ ಸಂದ ಜಯ -ಅಮಿತ್ ಶಾ

ಪಾಕಿಸ್ತಾನದಲ್ಲಿದ್ದ ವಶದಲ್ಲಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ಕಡಿಮೆ ದಿನದಲ್ಲಿಯೇ ತಾಯ್ನಾಡಿಗೆ ವಾಪಾಸ್ ಆಗುತ್ತಿರುವುದು ನಮ್ಮ ರಾಜತಾಂತ್ರಿಕತೆಗೆ ದೊರೆತ ಗೆಲುವು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನದಲ್ಲಿದ್ದ ವಶದಲ್ಲಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್  ಕಡಿಮೆ ದಿನದಲ್ಲಿಯೇ ತಾಯ್ನಾಡಿಗೆ ವಾಪಾಸ್ ಆಗುತ್ತಿರುವುದು  ನಮ್ಮ ರಾಜತಾಂತ್ರಿಕತೆಗೆ ದೊರೆತ ಗೆಲುವು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಇಂಡಿಯಾ ಟುಡೆ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ಪುಲ್ವಾಮಾ ದಾಳಿ ನಂತರ ಏರ್ ಸ್ಟ್ರೈಕ್ ಮೂಲಕ ಪಾಕಿಸ್ತಾನವನ್ನು ಜಾಗತಿಕ ಮಟ್ಟದಲ್ಲಿ ಏಕಾಂಗಿಯನ್ನಾಗಿ ಮಾಡಲಾಗಿದೆ. ಇದು ನಮ್ಮ ರಾಜತಾಂತ್ರಿಕತೆಗೆ ದೊರೆತ ವಿಜಯ ಎಂದರು.

ಮಂಗಳವಾರ ಮುಂಜಾನೆ ಪಾಕಿಸ್ತಾನದ ಗಡಿ ದಾಟಿ  ಒಳನುಗಿದ್ದ ಭಾರತೀಯ ವಾಯುಪಡೆ ಬಾಲಕೋಟ್ ನಲ್ಲಿದ್ದ ಜೈಷ್- ಇ- ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರಗಳನ್ನು ಬಾಂಬ್ ಹಾಕಿ ನಾಶಗೊಳಿಸಿದ್ದವು. ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು.

ವಾಘಾ ಗಡಿ ಮೂಲಕ ಅಭಿನಂದನ್ ಭಾರತ ಪ್ರವೇಶಿಸಲಿದ್ದು, ಅವರನ್ನು ಸ್ವಾಗತಿಸಲು ಭಾರತೀಯ ವಾಯುಪಡೆ ಕಾಯುತ್ತಾ ನಿಂತಿದೆ. ಸಂಜೆ 4 ಗಂಟೆ ವೇಳೆಗೆ ಅಭಿನಂದನ್ ಭಾರತಕ್ಕೆ ವಾಪಾಸ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ರಾತ್ರಿ 8 ಆದರೂ ಅಭಿನಂದನ್ ಬಂದಿಲ್ಲ.ಪಾಕಿಸ್ತಾನದ ವಿಳಂಬ ನೀತಿಗೆ ಕಾರಣ ತಿಳಿದುಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT