ಸಂಗ್ರಹ ಚಿತ್ರ 
ದೇಶ

ಪಾಕ್‌ನಲ್ಲಿ ಭಾರತೀಯ ವಾಯುಸೇನೆ ನಡೆಸಿದ ಏರ್ ಸ್ಟ್ರೈಕ್‍ನಲ್ಲಿ ಸತ್ತ ಉಗ್ರರೆಷ್ಟು? ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು!

ಭಾರತೀಯ ವಾಯುಸೇನೆ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರವನ್ನು ಗುರಿಯನ್ನಾಗಿಸಿಕೊಂಡು ಏರ್ ಸ್ಟ್ರೈಕ್ ನಡೆಸಿತ್ತು.

ನವದೆಹಲಿ: ಭಾರತೀಯ ವಾಯುಸೇನೆ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಶಿಬಿರವನ್ನು ಗುರಿಯನ್ನಾಗಿಸಿಕೊಂಡು ಏರ್ ಸ್ಟ್ರೈಕ್ ನಡೆಸಿತ್ತು. ಇದಕ್ಕೆ ಸಾಕ್ಷಿ ನೀಡುವಂತೆ ನಮ್ಮ ರಾಜಕಾರಣಿಗಳು ಪಟ್ಟು ಹಿಡಿದಿದ್ದು ಈ ಮಧ್ಯೆ ಪ್ರತ್ಯಕ್ಷದರ್ಶಿಗಳೇ ಅಲ್ಲಿನ ಸಾವು ನೋವಿನ ಬಗ್ಗೆ ವಿವರಿಸಿದ್ದಾರೆ.
ಭಾರತ ನಡೆಸಿದ ಏರ್ ಸ್ಟ್ರೈಕ್ ಸ್ಥಳದಲ್ಲಿ 35ಕ್ಕೂ ಹೆಚ್ಚು ಮೃತದೇಹಗಳನ್ನು ನೋಡಿದ್ದಾಗಿ ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇನ್ನು ದಾಳಿ ನಡೆದ ಒಂದು ಗಂಟೆಯ ನಂತರ ಆ ಮೃತದೇಹಗಳನ್ನು ಆ್ಯಂಬುಲೆನ್ಸ್ ನಲ್ಲಿ ಸಾಗಿಸಲಾಯಿತು. ಸುಮಾರು 12 ಮಂದಿ ತಾತ್ಕಾಲಿಕವಾದ ಮರದ ಒಂದೇ ಕಟ್ಟಡದಲ್ಲಿ ಇದ್ದರು. ದಾಳಿಯಲ್ಲಿ ಹಲವು ಮಂದಿ ಪಾಕಿಸ್ತಾನ ಸೇನೆಯಲ್ಲಿ ಸೇವೆ ಸಲ್ಲಿಸಿದವರು ದಾಳಿ ವೇಳೆ ಹತರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ದಾಳಿಯ ಕುರಿತ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ನೀಡಬಾರದು ಎಂದು ಅಲ್ಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿತ್ತು ಎಂದು ಮೂಲಗಳು ಹೇಳಿವೆ. ಅಲ್ಲದೇ ಪ್ರತೀಕಾರದಿಂದ ಅವರು ಬೆಚ್ಚಿಬಿದ್ದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಫಸ್ಟ್ ಪೋಸ್ಟ್ ವಿಶೇಷ ವರದಿ ಪ್ರಕಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT