ವೈಮಾನಿಕ ದಾಳಿ ನಡೆದ ಸ್ಥಳ 
ದೇಶ

ವೈಮಾನಿಕ ದಾಳಿಯಲ್ಲಿ ಜೈಶ್​ ತರಬೇತಿ ಕೇಂದ್ರದ 4 ಕಟ್ಟಡಗಳು ಧ್ವಂಸ: ರಡಾರ್ ಚಿತ್ರಗಳಿಂದ ಖಚಿತ

ಫೆಬ್ರವರಿ 26ರಂದು ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಬಾಲಕೋಟ್ ನ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ತರಬೇತಿ ಕೇಂದ್ರದ...

ನವದೆಹಲಿ: ಫೆಬ್ರವರಿ 26ರಂದು ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಬಾಲಕೋಟ್ ನ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ತರಬೇತಿ ಕೇಂದ್ರದ ನಾಲ್ಕು ಕಟ್ಟಡಗಳನ್ನು ಧ್ವಂಸಗೊಳಿಸಿರುವುದು ರಡಾರ್ ಚಿತ್ರಗಳಿಂದ ಖಚಿತವಾಗಿದೆ ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಬಾಲಕೋಟ್ ​ನಲ್ಲಿ ಭಾರತ ವೈಮಾನಿಕ ದಾಳಿ ನಡೆಸಿ, ಸುರಕ್ಷಿತವಾಗಿ ಮರಳಿದ ಬಗ್ಗೆ ಸಾಕಷ್ಟು ಅನುಮಾನ ಹಾಗೂ ಊಹಾಪೋಹಗಳು ವ್ಯಕ್ತವಾಗುತ್ತಿವೆ. ಆದರೆ, ದಾಳಿಯಲ್ಲಿ ಜೈಶ್ ಸಂಘಟನೆಯ ನಾಲ್ಕು ಕಟ್ಟಡಗಳು ಸಂಪೂರ್ಣವಾಗಿ ಧ್ವಂಸವಾಗಿರುವುದು ರಡಾರ್ ಚಿತ್ರಗಳಲ್ಲಿ ಸ್ಪಷ್ಟವಾಗಿದೆ ಎಂದಿರುವ ಅಧಿಕಾರಿಗಳು,  ಎಷ್ಟು ಉಗ್ರರು ಹತ್ಯೆಯಾಗಿದ್ದಾರೆ ಎಂಬುದನ್ನು ಅಂದಾಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತದ ಬೇಹುಗಾರಿಕಾ ಪಡೆ ಸಿಂಥೆಟಿಕ್​ ಅಪಾರ್ಚರ್​ ರಡಾರ್ (ಎಸ್​ಎಆರ್​) ಇಮೇಜರಿ ಮೂಲಕ ಸಂಗ್ರಹಿಸಿರುವ ಹಲವು ಸಾಕ್ಷ್ಯಗಳ ಪ್ರಕಾರ ‘ಮಿರಾಜ್​- 2000’ ಯುದ್ಧ ವಿಮಾನಗಳಿಂದ ಸಿಡಿಸಿದ ಎಸ್​-2000 ಪ್ರಿಷಿಷನ್​ ಗೈಡೆಡ್​ ಮ್ಯುನಿಷನ್​ (ಪಿಜಿಎಂ) ಕ್ಷಿಪಣಿಗಳು ಕಟ್ಟಡದ ಛಾವಣಿಯನ್ನು ಬೇಧಿಸಿ ಕಟ್ಟಡ ಧ್ವಂಸಗೊಳಿಸಿರುವುದು ಖಚಿತವಾಗಿದೆ.
ಇದೊಂದು ಮದರಸಾ ರೀತಿಯ ಸಮುಚ್ಚಯವಾಗಿತ್ತು. ಈ ಸಮುಚ್ಚಯದಲ್ಲಿರುವ ಗೆಸ್ಟ್​ ಹೌಸ್​ನಲ್ಲಿ ಜೈಷ್​ ಸಂಘಟನೆಯ ಪ್ರಮುಖ ಉಗ್ರ ಮೌಲಾನಾ ಮಸೂದ್​ ಅಜರ್​ನ ಸಹೋದರ ವಾಸವಾಗಿದ್ದ. ಇನ್ನೊಂದು ಎಲ್​ ಆಕಾರದ ಕಟ್ಟಡದಲ್ಲಿ ತರಬೇತಿನಿರತ ಉಗ್ರರು ಇದ್ದರು. ಇನ್ನೊಂದು ಎರಡು ಅಂತಸ್ತಿನ ಕಟ್ಟಡದಲ್ಲಿ ಮದರಸಾದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಇರುತ್ತಿದ್ದರು. ಇನ್ನೊಂದು ಕಟ್ಟಡದಲ್ಲಿ ಅಂತಿಮ ಹಂತದ ತರಬೇತಿಯಲ್ಲಿದ್ದ ಉಗ್ರರು ವಾಸವಾಗಿದ್ದರು. ಈ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ದಾಳಿ ಸಂಘಟಿಸಲಾಗಿತ್ತು. ಅದು ಯಶಸ್ವಿಯಾಗಿದೆ ಎಂದು ಭಾರತದ ಬೇಹುಗಾರಿಕಾ ಪಡೆ ಮೂಲಗಳು ತಿಳಿಸಿವೆ.
ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ 300ರಿಂದ 350 ಉಗ್ರರು ಹತರಾಗಿದ್ದಾರೆ, ಕಟ್ಟಡಗಳು ಧ್ವಂಸಗೊಂಡಿವೆ ಎಂದೆಲ್ಲ ಹೇಳಲಾಗಿತ್ತು. ಆದರೆ, ದಾಳಿ ನಡೆದಿದ್ದನ್ನು ಒಪ್ಪಿಕೊಂಡಿದ್ದ ಪಾಕಿಸ್ತಾನ, ಯಾವುದೇ ಜೀವಹಾನಿಯಾಗಿಲ್ಲ ಎಂದು ಹೇಳಿತ್ತು.
ಈ ಮಧ್ಯೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ದಾಳಿಯಲ್ಲಿ ಹತರಾಗಿರುವ ಉಗ್ರರ ಸಂಖ್ಯೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT