ಹಂದ್ವಾರ ಎನ್ಕೌಂಟರ್ 
ದೇಶ

ಹಂದ್ವಾರ; 3ನೇ ದಿನಕ್ಕೆ ಕಾಲಿಟ್ಟ ಎನ್ ಕೌಂಟರ್, ಓರ್ವ ಉಗ್ರ ಹತ, ಸ್ಥಳೀಯರ ಪ್ರತಿಭಟನೆಯಿಂದಾಗಿ ಕಾರ್ಯಾಚರಣೆ ವಿಳಂಬ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ಕಳೆದ ಶುಕ್ರವಾರ ರಾತ್ರಿ ಆರಂಭವಾಗಿದ್ದ ಗುಂಡಿನ ಕಾಳಗ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ ರಾತ್ರಿ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿವೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ಕಳೆದ ಶುಕ್ರವಾರ ರಾತ್ರಿ ಆರಂಭವಾಗಿದ್ದ ಗುಂಡಿನ ಕಾಳಗ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ ರಾತ್ರಿ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿವೆ.
ಹಂದ್ವಾರದ ಬಾಬಾಗುಂಡ್ ಗ್ರಾಮದಲ್ಲಿನ ಮೂರು ಮನೆಗಳಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಕಾಶ್ಮೀರ ಪೊಲೀಸರು ಹಾಗೂ ಸಿಆರ್ ಪಿಎಫ್ ಯೋಧರು ಮನೆಗಳನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದು, ಕಳೆದ 60 ಗಂಟೆಗಳಲ್ಲಿ ಉಗ್ರರ ಗುಂಡಿಗೆ ಇಬ್ಬರು ಸಿಆರ್ ಪಿಎಫ್ ಯೋಧರು, ಇಬ್ಬರು ಕಾಶ್ಮೀರ ಪೊಲೀಸರು ಹುತಾತ್ಮರಾಗಿದ್ದಾರೆ.
ಅಂತೆಯೇ ಕಳೆದ ರಾತ್ರಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಓರ್ವ ನಾಗರಿಕನಿಗೂ ಗಾಯವಾಗಿದೆ ಎಂದು ತಿಳಿದುಬಂದಿದೆ. ಇನ್ನು ಉಗ್ರರು ಅಡಗಿದ್ದ ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಮನೆಗಳು ಭಾಗಶಃ ಹಾನಿಯಾಗಿದೆ. ಅಲ್ಲದೆ ಮನೆ ಧ್ವಂಸವಾಗಿದ್ದು ಉಗ್ರನ ಶವ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯ ಆರಂಭವಾಗಿದೆ.
ಅಂತೆಯೇ ಘಟನಾ ಪ್ರದೇಶದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು, ಕಾರ್ಯಾಚರಣೆ ತಡವಾಗಿದೆ. ಮನೆಗಳ ಧ್ವಂಸವನ್ನು ವಿರೋಧಿಸಿ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!