ಹಂದ್ವಾರ ಎನ್ ಕೌಂಟರ್ 
ದೇಶ

ಹಂದ್ವಾರ ಎನ್ ಕೌಂಟರ್: ಇಬ್ಬರು ಉಗ್ರ ಹೆಡೆಮುರಿ ಕಟ್ಟಿದ ಸೇನೆ, ಭದ್ರತಾ ಪಡೆಯ 5 ಮಂದಿ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಸೇನಾಪಡೆಗಳು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಸಾವಿಗೀಡಾದ ಉಗ್ರ ಸಂಖ್ಯೆ 2ಕ್ಕೇರಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಸೇನಾಪಡೆಗಳು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಸಾವಿಗೀಡಾದ ಉಗ್ರ ಸಂಖ್ಯೆ 2ಕ್ಕೇರಿದೆ.
ಕಳೆದ ಶುಕ್ರವಾರ ರಾತ್ರಿಯಿಂದ ಆರಂಭವಾಗಿದ್ದ ಗುಂಡಿನ ಕಾಳಗ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ ರಾತ್ರಿ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿತ್ತು. ಹಂದ್ವಾರದ ಬಾಬಾಗುಂಡ್ ಗ್ರಾಮದಲ್ಲಿನ ಮೂರು ಮನೆಗಳಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಕಾಶ್ಮೀರ ಪೊಲೀಸರು ಹಾಗೂ ಸಿಆರ್ ಪಿಎಫ್ ಯೋಧರು ಮನೆಗಳನ್ನು ಸುತ್ತುವರೆದು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದು, ಕಳೆದ 60 ಗಂಟೆಗಳಲ್ಲಿ ಉಗ್ರರ ಗುಂಡಿಗೆ ಇಬ್ಬರು ಸಿಆರ್ ಪಿಎಫ್ ಯೋಧರು, ಇಬ್ಬರು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು ಜ್ಞ ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ.
ಘಟನೆಯಲ್ಲಿ ಓರ್ವ ನಾಗರಿಕನಿಗೂ ಗಾಯವಾಗಿದೆ ಎಂದು ತಿಳಿದುಬಂದಿದೆ. ಇನ್ನು ಉಗ್ರರು ಅಡಗಿದ್ದ ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಮನೆಗಳು ಭಾಗಶಃ ಹಾನಿಯಾಗಿದೆ. ಅಲ್ಲದೆ ಮನೆ ಧ್ವಂಸವಾಗಿದ್ದು ಉಗ್ರನ ಶವ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯ ಆರಂಭವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT