ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ವಿಚಾರ ಸಂಪೂರ್ಣ ಆಂತರಿಕ, ಇತರರ ಮಧ್ಯಸ್ಥಿಕೆ ಬೇಡ; ಸುಷ್ಮಾ ಸ್ವರಾಜ್

ಸೌದಿಯಲ್ಲಿ ನಡೆಯುತ್ತಿರುವ ಇಸ್ಲಾಮಿಕ್‌ ಸಹಕಾರ ಸಂಘಟನೆ (ಒಐಸಿ) ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಅವಿರೋಧ ನಿರ್ಣಯ ಕೈಗೊಂಡ ಬೆನ್ನಲ್ಲೇ ತಿರುಗೇಟು ನೀಡಿರುವ ಭಾರತ ಕಾಶ್ಮೀರ ವಿಚಾರ ಸಂಪೂರ್ಣ ಆಂತರಿಕವಿಚಾರವಾಗಿದ್ದು, ಇತರರ ಮಧ್ಯಸ್ಥಿಕೆ ಬೇಡ ಎಂದು ಹೇಳಿದೆ.

ಅಬುದಾಬಿ: ಸೌದಿಯಲ್ಲಿ ನಡೆಯುತ್ತಿರುವ ಇಸ್ಲಾಮಿಕ್‌ ಸಹಕಾರ ಸಂಘಟನೆ (ಒಐಸಿ) ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಅವಿರೋಧ ನಿರ್ಣಯ ಕೈಗೊಂಡ ಬೆನ್ನಲ್ಲೇ ತಿರುಗೇಟು ನೀಡಿರುವ ಭಾರತ ಕಾಶ್ಮೀರ ವಿಚಾರ ಸಂಪೂರ್ಣ ಆಂತರಿಕವಿಚಾರವಾಗಿದ್ದು, ಇತರರ ಮಧ್ಯಸ್ಥಿಕೆ ಬೇಡ ಎಂದು ಹೇಳಿದೆ.
ಕಾಶ್ಮೀರದಲ್ಲಿನ ಆಂತರಿಕ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಒಐಸಿಯಲ್ಲಿ ಕಾಶ್ಮೀರದಲ್ಲಿನ ಅಕ್ರಮ ಬಂಧನಗಳು ಮತ್ತು ಕಣ್ಮರೆ ವಿರೋಧಿಸಿ ನಿನ್ನೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದನ್ನು ವಿರೋಧಿಸಿರುವ ಭಾರತ ಕಾಶ್ಮೀರ ಸಂಪೂರ್ಣ ಆಂತರಿಕ ವಿಚಾರವಾಗಿದ್ದು, ಇದರಲ್ಲಿ ಇತರರ ಮಧ್ಯಸ್ಥಿಕೆ ಬೇಡ ಎಂದು ತಿರುಗೇಟು ನೀಡಿದೆ.
ಅಂತೆಯೇ ಕಾಶ್ಮೀರ ಎಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರಲಿದ್ದು, ಕಾಶ್ಮೀರ ವಿಚಾರದಲ್ಲಿ ನಮ್ಮ ನಿಲುವು ಸಡಿಲಗೊಳಿಸುವುದು ಸಾಧ್ಯವಿಲ್ಲ. ಅಂತೆಯೇ ಇದರಲ್ಲಿ ಇತರೆ ರಾಷ್ಟ್ರಗಳ ಮಧ್ಯಪ್ರವೇಶವನ್ನೂ ಭಾರತ ವಿರೋಧಿಸುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟವಾಗಿ ಹೇಳಿದ್ದಾರೆ.
ಅಂತೆಯೇ ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ಛಾಟಿ ಬೀಸಿರುವ ಸುಷ್ಮಾ, ಕಾಶ್ಮೀರ ರಾಜ್ಯದ ರಕ್ಷಣೆಯಾಗಬೇಕು ಎಂದರೆ ಭಯೋತ್ಪಾದನೆಗೆ ಪ್ರಾಯೋಜಕತ್ವ ವಹಿಸುತ್ತಿರುವ ರಾಷ್ಟ್ರಗಳನ್ನು ಇದರಿಂದ ದೂರ ಇರುವಂತೆ ನೋಡಿಕೊಳ್ಳಬೇಕು. ಅಂತೆಯೇ ಉಗ್ರರಿಗೆ ಆ ರಾಷ್ಟ್ರಗಳು ನೀಡುತ್ತಿರುವ ನೆರವು ತಡೆ ಹಿಡಿಯಬೇಕು ಎಂದು ಅಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT