ಸಂಗಮದಲ್ಲಿ ಭಕ್ತ ಸಾಗರ 
ದೇಶ

ಮಹಾಶಿವರಾತ್ರಿ, ಕುಂಭಮೇಳಕ್ಕೆ ಕೊನೆಯ ದಿನ; ಸಂಗಮದತ್ತ ಒಂದು ಕೋಟಿಗೂ ಅಧಿಕ ಭಕ್ತರು!

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೊನೆಯ ಶಾಹಿ ಸ್ನಾನ ಮಾಡಲು ಸಂಗಮದತ್ತ ಇಂದು ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಪ್ರಯಾಗ್ ರಾಜ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೊನೆಯ ಶಾಹಿ ಸ್ನಾನ ಮಾಡಲು ಸಂಗಮದತ್ತ ಇಂದು ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಮಹಾಶಿವರಾತ್ರಿಯ ಶುಭದಿನದಂದು ಕೊನೆಯ ಶಾಹಿ ಸ್ನಾನದೊಂದಿಗೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭ ಮೇಳ ಸಂಪನ್ನವಾಗಲಿದೆ. ಸೋಮವಾರ ಕೊನೆಯ ಪುಣ್ಯಸ್ನಾನದಲ್ಲಿ ಮಿಂದು ಪುನೀತರಾಗಲು ಸುಮಾರು ಒಂದು ಕೋಟಿ ಭಕ್ತರು ಪ್ರಯಾಗ್‌ರಾಜ್‌ಗೆ ಆಗಮಿಸುವ ನಿರೀಕ್ಷೆಯಿದೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಪ್ರಯಾಗ್‌ರಾಜ್‌ನಲ್ಲಿ ಜನವರಿ 15ರ ಸಂಕ್ರಾಂತಿಯಂದು ಆರಂಭವಾದ ಕುಂಭಮೇಳದಲ್ಲಿ ಇದುವರೆಗೂ 22 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಕೈಗೊಂಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರು ಪುಣ್ಯಸ್ನಾನ ಕೈಗೊಂಡಿದ್ದಾರೆ. ಸ್ವಚ್ಛತೆ, ಅಚ್ಚುಕಟ್ಟಾದ ವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದ ಉತ್ತರ ಪ್ರದೇಶ ಸರಕಾರ ಜನರ ಪ್ರಶಂಸೆಗೆ ಪಾತ್ರವಾಗಿದೆ.  ಕುಂಭ ಮೇಳದಲ್ಲಿ ಒಟ್ಟು ಆರು ವಿಶೇಷ ದಿನಗಳಂದು ಪವಿತ್ರ ಸ್ನಾನ ನಡೆಯುತ್ತದೆ. ಮಕರ ಸಂಕ್ರಾಂತಿ (ಜನವರಿ 15), ಮೌನಿ ಅಮವಾಸ್ಯೆ (ಫೆಬ್ರವರಿ 4) ಮತ್ತು ವಸಂತ ಪಂಚಮಿ (ಫೆಬ್ರವರಿ19) ಎಂದು ಶಾಹೀ ಸ್ನಾನ ಹಾಗೂ ಪುಷ್ಯ ಹುಣ್ಣಿಮೆ (ಜನವರಿ 21) ಮತ್ತು ಮಾಘಿ ಹುಣ್ಣಿಮೆ (ಫೆಬ್ರವರಿ19) ಎಂದು ಪರ್ವ ಸ್ನಾನ ನಡೆದಿದೆ. 
ಬಿಗಿ ಭದ್ರತೆ
ಇನ್ನು ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಇದೇ ಕಾರಣಕ್ಕೆ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಉತ್ತರ ಪ್ರದೇಶ ಪೊಲೀಸ್‌ ಮಹಾನಿರ್ದೇಶಕ ಒ.ಪಿ.ಸಿಂಗ್‌ ಅವರು, 'ಕೊನೆಯ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 20,000 ಪೊಲೀಸ್‌ ಸಿಬ್ಬಂದಿ, 6,000 ಹೋಮ್‌ಗಾರ್ಡ್ಸ್, 40 ಪೊಲೀಸ್‌ ಠಾಣೆಗಳು, 58 ಹೊರ ಠಾಣೆಗಳು, ಕೇಂದ್ರ ಮೀಸಲು ಪಡೆಯ 80 ತುಕಡಿಗಳು ಮತ್ತು ಪಿಎಸಿಯ 20 ತುಕುಡಿಗಳನ್ನು ನಿಯೋಜಿಸಲಾಗಿದೆ'' ಎಂದು  ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT