ದೇಶಾದ್ಯಂತ ಮೂತ್ರ ಸಂಗ್ರಹಿಸಿದರೆ ಯೂರಿಯಾ ಆಮದಿಗೆ ಮುಕ್ತಿ: ಸಚಿವ ಗಡ್ಕರಿಯ ಹೊಸ ಐಡಿಯಾ! 
ದೇಶ

ದೇಶಾದ್ಯಂತ ಮೂತ್ರ ಸಂಗ್ರಹಿಸಿದರೆ ಯೂರಿಯಾ ಆಮದಿಗೆ ಮುಕ್ತಿ: ಸಚಿವ ಗಡ್ಕರಿ ಹೊಸ ಐಡಿಯಾ!

ತಮ್ಮ ವಿನೂತನ ಐಡಿಯಾಗಳಿಂದ ಹೆಚ್ಚು ಸುದ್ದಿಯಲ್ಲಿರುವ ನಿತಿನ್ ಗಡ್ಕರಿ, ಅಂಥಹದ್ದೇ ಮತ್ತೊಂದು ಉಪಾಯದೊಂದಿಗೆ ಬಂದಿದ್ದಾರೆ.

ನಾಗ್ಪುರ: ತಮ್ಮ ವಿನೂತನ ಐಡಿಯಾಗಳಿಂದ ಹೆಚ್ಚು ಸುದ್ದಿಯಲ್ಲಿರುವ ನಿತಿನ್ ಗಡ್ಕರಿ, ಅಂಥಹದ್ದೇ  ಮತ್ತೊಂದು ಉಪಾಯದೊಂದಿಗೆ ಬಂದಿದ್ದಾರೆ.
ಕೃಷಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಆಮದಾಗುತ್ತಿದ್ದು, ಇದನ್ನು ತಡೆಗಟ್ಟುವುದಕ್ಕೆ ಗಡ್ಕರಿ ವಿನೂತನವಾದ ಕಲ್ಪನೆಯೊಂದನ್ನು ಪ್ರಸ್ತಾಪಿಸಿದ್ದಾರೆ. ಅದೇನೆಂದರೆ ಮೂತ್ರದ ಶೇಖರಣೆ! ಹೌದು ಕೇಳುವುದಕ್ಕೆ ಸ್ವಲ್ಪ ವಿಚಿತ್ರ ಎನಿಸಿದರೂ ಗಡ್ಕರಿ ಇಂಥದ್ದೊಂದು ವಿಚಿತ್ರವಾದ ಕಲ್ಪನೆಯೊಂದನ್ನು ಸಂಶೋಧಕರಿಗೆ ಸಲಹೆ ನೀಡಿದ್ದಾರೆ. 
ನಾಗ್ಪುರ ಪುರಸಭೆ ಕಾರ್ಪೊರೇಷನ್ ನ ಮೇಯರ್ ಇನೋವೇಷನ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ನಿತಿನ್ ಗಡ್ಕರಿ, ವಿಮಾನ ನಿಲ್ದಾಣಗಳಲ್ಲಿ ಮೂತ್ರವನ್ನು ಶೇಖರಿಸಲು ಸಲಹೆ ನೀಡಿದ್ದೇನೆ. ನಾವು ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾವನ್ನು ಆಮದು ಮಾಡಿಕೊಳ್ಳುತ್ತೇವೆ. ಆದರೆ ನಾವು ದೇಶದ ಜನತೆ ಮೂತ್ರ ಸಂಗ್ರಹಣೆ ಮಾಡಿದರೆ ಯೂರಿಯಾ ಆಮದು ಮಾಡಿಕೊಳ್ಳುವ ಅಗತ್ಯವೇ ಇರುವುದಿಲ್ಲ, ಮೂತ್ರದಲ್ಲಿ ವಿಶೇಷ ಸಾಮರ್ಥ್ಯವಿದೆ, ಮನುಷ್ಯನ ಮೂತ್ರದಿಂದ ಜೈವಿಕ ಇಂಧನವನ್ನೂ ತಯಾರಿಸಬಬಹುದು ಯಾವುದೂ ವ್ಯರ್ಥವಾಗುವುದಿಲ್ಲ. ಅದರಿಂದ ಅಮೋನಿಯಂ ಸಲ್ಫೇಟ್ ಹಾಗೂ ನೈಟ್ರೋಜನ್ ಲಭ್ಯವಾಗುತ್ತದೆ 
ನನ್ನ ವಿನೂತನ ಕಲ್ಪನೆಗಳಿಗೆ ಯಾರೂ ಸಹಕಾರ ನೀಡುವುದಿಲ್ಲ, ಕಾರ್ಪೊರೇಷನ್ ಸಹ ನನ್ನ ಕಲ್ಪನೆಗಳಿಗೆ ಸಹಕರಿಸುವುದಿಲ್ಲ ಏಕೆಂದರೆ ಸರ್ಕಾರದಲ್ಲಿರುವ ಜನರನ್ನು ಆಚೆ ಈಚೆ ನೋಡದೇ ನುಗ್ಗುವ ಹೋರಿಗಳಂತೆ ತಯಾರು ಮಾಡಲಾಗುತ್ತದೆ ಎಂದು ಇದೇ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ನಿತಿನ್ ಗಡ್ಕರಿ ಮೂತ್ರದಿಂದ ಗೊಬ್ಬರ ಮಾಡುವ ಕಲ್ಪನೆಯನ್ನು ಕೇವಲ ಸಲಹೆಗೆ ಸೀಮಿತ ಮಾಡದೇ ದೆಹಲಿಯಲ್ಲಿರುವ ತಮ್ಮ ಗಾರ್ಡನ್ ನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದಾರೆ. 
ಈ ವೇಳೆ ಮಾನವನ ತಲೆಕೂದಲು ಬಳಸಿ ಅಮೈನೊ ಆ್ಯಸಿಡ್ ಉತ್ಪಾದನೆಯ ವಿಚಾರವನ್ನು ಪ್ರಸ್ತಾಪಿಸಿರುವ ಅವರು, ನಾಗ್ಪುರದಲ್ಲಿ ಜಾಸ್ತಿ ಪ್ರಮಾಣದಲ್ಲಿ ತಲೆಕೂದಲು ಸಿಗದ ಕಾರಣ ನಾವು ಪ್ರತಿ ತಿಂಗಳು ತಿರುಪತಿಯಿಂದ 5 ಟ್ರಕ್ ತಲೆಕೂದಲನ್ನು ತರುತ್ತೇವೆ ಎಂದು ತಿಳಿಸಿದರು.  ತಲೆಕೂದಲಿನ ಪ್ರಯೋಗ ಯಶಸ್ವಿಯಾದ ಬಳಿಕ ಅಮೈನೊ ಆ್ಯಸಿಡ್ ಉತ್ಪಾದನೆ ಶೇ.25 ರಷ್ಟು ಹೆಚ್ಚಾಗಿದೆ. ನಾವು ಈಗ ವಿದೇಶಕ್ಕೆ ಅಮೈನೊ ಆ್ಯಸಿಡ್ ಮಾರಾಟ ಮಾಡುತ್ತೇವೆ. ದುಬೈ ಸರ್ಕಾರ 180 ಕಂಟೈನರ್ ಬಯೋ ಗೊಬ್ಬರಕ್ಕೆ ಆರ್ಡರ್ ಮಾಡಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT