ಐಎಎಫ್ ದಾಳಿ: ಪ್ರತಿಪಕ್ಷಗಳ ಹೇಳಿಕೆಗೆ ಧ್ವನಿಗೂಡಿಸಿದ ಬಿಜೆಪಿ ಮಿತ್ರಪಕ್ಷ ಶಿವಸೇನೆ 
ದೇಶ

ಬಾಲಾಕೋಟ್ ಐಎಎಫ್ ದಾಳಿ: ಜನರಿಗೆ ವಿವರ ತಿಳಿದುಕೊಳ್ಳುವ ಹಕ್ಕಿದೆ, ಪ್ರತಿಪಕ್ಷಗಳ ಹೇಳಿಕೆಗೆ ಶಿವಸೇನೆ ಧ್ವನಿ

ಭಾರತೀಯ ವಾಯುಪಡೆ ಪಾಕಿಸ್ತಾನ ನೆಲದಲ್ಲಿ ವೈಮಾನಿಕ ದಾಳಿ ನಡೆಸಿರುವುದಕ್ಕೆ ಸಾಕ್ಷ್ಯ ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆಯೂ ಸಹ ಧ್ವನಿಗೂಡಿಸಿದೆ.

ಮುಂಬೈ: ಭಾರತೀಯ ವಾಯುಪಡೆ ಪಾಕಿಸ್ತಾನ ನೆಲದಲ್ಲಿ ವೈಮಾನಿಕ ದಾಳಿ ನಡೆಸಿರುವುದಕ್ಕೆ ಸಾಕ್ಷ್ಯ ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆಯೂ ಸಹ ಧ್ವನಿಗೂಡಿಸಿದೆ. 
ದೇಶದ ಜನತೆಗೆ ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ನಿರ್ನಾಮವಾದ ಉಗ್ರರ ಬಗ್ಗೆ ಮಾಹಿತಿ ಪಡೆಯುವ ಹಕ್ಕು ಈ ದೇಶದ ಜನತೆಗೆ ಇದೆ, ಈ ಮಾಹಿತಿಗಳನ್ನು ಬಹಿರಂಗಗೊಳಿಸುವುದರಿಂದ ಸೇನೆಯ ನೈತಿಕತೆಯನ್ನು ಕುಗ್ಗಿಸುವಂತೇನು ಆಗುವುದಿಲ್ಲ ಎಂದು ಶಿವಸೇನೆ ಹೇಳಿದೆ. 
ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಈ ಕುರಿತು ಸಂಪಾದಕೀಯ ಪ್ರಕಟಿಸಿರುವ ಶಿವಸೇನೆ, ವೈಮಾನಿಕ ದಾಳಿಯ ಬಗ್ಗೆ ಮುಂಬರುವ ಲೋಕಸಭಾ ಚುನಾವಣೆವರೆಗೂ ಚರ್ಚೆಯಲ್ಲಿಯೇ ಇರುತ್ತದೆ. ಫೆ.14 ಕ್ಕಿಂತ ಮುನ್ನ ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದ ಮಹತ್ವದ ಅಂಶಗಳೆಲ್ಲವೂ ಈಗ ನಗಣ್ಯವಾಗಿದೆ ಎಂದು ಹೇಳಿದೆ. ಇದೇ ವೇಳೆ ಪುಲ್ವಾಮ ದಾಳಿಯ ಬಗ್ಗೆಯೂ ಸಂಪಾದಕೀಯದಲ್ಲಿ ಪ್ರಕಟಿಸಿರುವ ಶಿವಸೇನೆ, ಪುಲ್ವಾಮ ದಾಳಿ ನಡೆಸಿದ ಉಗ್ರನಿಗೆ 300 ಕೆ.ಜಿಯಷ್ಟು ಆರ್ ಡಿಎಕ್ಸ್ ಎಲ್ಲಿಂದ ಸಿಕ್ಕಿತು? ಎಂದು ಶಿವಸೇನೆ ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT