ಐಎಎಫ್ ದಾಳಿ: ಪ್ರತಿಪಕ್ಷಗಳ ಹೇಳಿಕೆಗೆ ಧ್ವನಿಗೂಡಿಸಿದ ಬಿಜೆಪಿ ಮಿತ್ರಪಕ್ಷ ಶಿವಸೇನೆ 
ದೇಶ

ಬಾಲಾಕೋಟ್ ಐಎಎಫ್ ದಾಳಿ: ಜನರಿಗೆ ವಿವರ ತಿಳಿದುಕೊಳ್ಳುವ ಹಕ್ಕಿದೆ, ಪ್ರತಿಪಕ್ಷಗಳ ಹೇಳಿಕೆಗೆ ಶಿವಸೇನೆ ಧ್ವನಿ

ಭಾರತೀಯ ವಾಯುಪಡೆ ಪಾಕಿಸ್ತಾನ ನೆಲದಲ್ಲಿ ವೈಮಾನಿಕ ದಾಳಿ ನಡೆಸಿರುವುದಕ್ಕೆ ಸಾಕ್ಷ್ಯ ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆಯೂ ಸಹ ಧ್ವನಿಗೂಡಿಸಿದೆ.

ಮುಂಬೈ: ಭಾರತೀಯ ವಾಯುಪಡೆ ಪಾಕಿಸ್ತಾನ ನೆಲದಲ್ಲಿ ವೈಮಾನಿಕ ದಾಳಿ ನಡೆಸಿರುವುದಕ್ಕೆ ಸಾಕ್ಷ್ಯ ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆಯೂ ಸಹ ಧ್ವನಿಗೂಡಿಸಿದೆ. 
ದೇಶದ ಜನತೆಗೆ ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ನಿರ್ನಾಮವಾದ ಉಗ್ರರ ಬಗ್ಗೆ ಮಾಹಿತಿ ಪಡೆಯುವ ಹಕ್ಕು ಈ ದೇಶದ ಜನತೆಗೆ ಇದೆ, ಈ ಮಾಹಿತಿಗಳನ್ನು ಬಹಿರಂಗಗೊಳಿಸುವುದರಿಂದ ಸೇನೆಯ ನೈತಿಕತೆಯನ್ನು ಕುಗ್ಗಿಸುವಂತೇನು ಆಗುವುದಿಲ್ಲ ಎಂದು ಶಿವಸೇನೆ ಹೇಳಿದೆ. 
ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಈ ಕುರಿತು ಸಂಪಾದಕೀಯ ಪ್ರಕಟಿಸಿರುವ ಶಿವಸೇನೆ, ವೈಮಾನಿಕ ದಾಳಿಯ ಬಗ್ಗೆ ಮುಂಬರುವ ಲೋಕಸಭಾ ಚುನಾವಣೆವರೆಗೂ ಚರ್ಚೆಯಲ್ಲಿಯೇ ಇರುತ್ತದೆ. ಫೆ.14 ಕ್ಕಿಂತ ಮುನ್ನ ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದ ಮಹತ್ವದ ಅಂಶಗಳೆಲ್ಲವೂ ಈಗ ನಗಣ್ಯವಾಗಿದೆ ಎಂದು ಹೇಳಿದೆ. ಇದೇ ವೇಳೆ ಪುಲ್ವಾಮ ದಾಳಿಯ ಬಗ್ಗೆಯೂ ಸಂಪಾದಕೀಯದಲ್ಲಿ ಪ್ರಕಟಿಸಿರುವ ಶಿವಸೇನೆ, ಪುಲ್ವಾಮ ದಾಳಿ ನಡೆಸಿದ ಉಗ್ರನಿಗೆ 300 ಕೆ.ಜಿಯಷ್ಟು ಆರ್ ಡಿಎಕ್ಸ್ ಎಲ್ಲಿಂದ ಸಿಕ್ಕಿತು? ಎಂದು ಶಿವಸೇನೆ ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT