ಕರ್ತಾರ್‌ಪುರ್‌ ಕಾರಿಡಾರ್: ಮಾರ್ಚ್ 14ರಂದು ಭಾರತ, ಪಾಕ್ ನಡುವೆ ಮೊದಲ ಸಭೆ 
ದೇಶ

ಕರ್ತಾರ್‌ಪುರ್‌ ಕಾರಿಡಾರ್: ಮಾರ್ಚ್ 14ರಂದು ಭಾರತ, ಪಾಕ್ ನಡುವೆ ಮೊದಲ ಸಭೆ

ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್‌ಪುರ್‌ ಗೆ ಸಂಪರ್ಕಿಸುವ ಕರ್ತಾರ್‌ಪುರ್‌ ಕಾರಿಡಾರ್ ಕುರಿತಂತೆ ಭಾರತ-ಪಾಕಿಸ್ತಾನದ ಮಡುವೆ ಮೊದಲ ಸಭೆ ಮಾರ್ಚ್ 14ರಂದು ನಡೆಯಲಿದೆ.

ನವದೆಹಲಿ: ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್‌ಪುರ್‌ ಗೆ ಸಂಪರ್ಕಿಸುವ ಕರ್ತಾರ್‌ಪುರ್‌ ಕಾರಿಡಾರ್  ಕುರಿತಂತೆ ಭಾರತ-ಪಾಕಿಸ್ತಾನದ ಮಡುವೆ ಮೊದಲ ಸಭೆ ಮಾರ್ಚ್ 14ರಂದು ನಡೆಯಲಿದೆ. ಪಂಜಾಬ್ ನ ಅಟಾರಿ-ವಾಘಾ ಗಡಿಯಲ್ಲಿ ಈ ಸಭೆ ಆಯೋಜನೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಈ ಸಭೆ ಬಳಿಕ ಅದೇ ದಿನದಂದು ಕಾರಿಡಾರ್ ನ  ಕುರಿತು ತಾಂತ್ರಿಕ ಮಟ್ಟದ ಚರ್ಚೆ ನಡೆಯಬೇಕೆಂದು ಭಾರತ ಸೂಚಿಸಿದೆ" ಎಂದು ಹೇಳಿಕೆ ತಿಳಿಸಿದೆ.
ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿದಂತೆ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಭಾರತ್-ಪಾಕ್ ನಡುವಿನ ಸಂಬಂಧ ಸಂಘರ್ಷ ಕೊನೆಗೊಳಿಸಲು ಪಾಕಿಸ್ತಾನ ಕ್ರಮಗಳನ್ನು ಕೈಗೊಂಡಿದೆ. ಮಾರ್ಚ್ 6 ರಂದು ದೆಹಲಿಗೆ ಭಾರತದ ಹೈಕಮಿಷನರ್ ಸೊಹೈಲ್ ಮಹಮೂದ್ ಹಿಂತಿರುಗುವಂತೆಯೂ ಸೂಚಿಸಿದೆ. 
ಮಾರ್ಚ್ 14ರ ಸಭೆಯ ಬಳಿಕ ಮಾರ್ಚ್ 28ರಂದು ಭಾರತೀಯ ನಿಯೋಗವು ಇಸ್ಲಾಮಾಬಾದ್ ಗೆ ಭೇಟಿ ನೀಡಲಿದೆ.
ಫೆಬ್ರುವರಿ 14 ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇಹಮ್ಮದ್ (ಜೆಎಂ) ನಡೆಸಿದ ಪುಲ್ವಾಮಾ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ ಸಮಾಲೋಚನೆಗಳಿಗಾಗಿ ಮಹಮೂದ್ ಅವರನ್ನು ಪಾಕಿಸ್ತಾನ ಹಿಂದಕ್ಕೆ ಕರೆಸಿಕೊಂಡಿತ್ತು. ಇದೀಗ ಮಂಗಳವಾರ ರಾತ್ರಿ ಪಾಕಿಸ್ತಾನವು ಜಮಾತ್-ಉಲ್-ದವಾ(ಜೆಯುಡಿ)ಮತ್ತು ಅದರ ಸಹ-ಸಂಸ್ಥೆಫಲಾಹ್ ಇ ಇನ್ಸ್ಯಾನಿಟ್ ಫೌಂಡೇಶನ್ (ಎಫ್ಐಎಫ್) ಗಳನ್ನು ಹಾಗೂ ಲಷ್ಕರ್-ಇ-ತೊಯ್ಬಾ ಭಯೋತ್ಪಾದನಾ ಸಂಘಟನೆ ಸೇರಿ ಹಲವು ಸಂಘಟನೆಗಳನ್ನು ಭಯೋತ್ಪಾದನೆ ವಿದ್ರೋಧಿ ಕಾಯ್ದೆ 1997ರ ಅಡಿಯಲ್ಲಿ ನಿಷೇಧಿಸಿದೆ. ಆದರೆ ಜೆಇಎಂ ವುಇರುದ್ಧ ಇದುವರೆಗೆ ಯಾವ ನಿಷೇಧವನ್ನೂ ಹೇರಿಲ್ಲ. ಈ ಹಿನ್ನೆಲೆಯಲ್ಲಿ ಮೊನ್ನಿನ ಪುಲ್ವಾಮಾ ದಾಳಿ ಬಳಿಕ ಭಾರತ ಸೇರಿ ಜ್ಗತಿಕ ಶಕ್ತಿಶಾಲಿ ರಾಷ್ಟ್ರಗಳು  ಭಯೋತ್ಪಾದಕ ಸಂಘಟನೆಗಳನ್ನು ನಿಷೇಧಿಸಭೇಕೆಂದು ಪಾಕಿಸ್ತಾನಕ್ಕೆ ತೀವ್ರ ಒತ್ತಡ ಹಾಕಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

1998-2025ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್.ಅಶೋಕ್

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

SCROLL FOR NEXT