ರಾಫೆಲ್ 
ದೇಶ

ರಕ್ಷಣಾ ಸಚಿವಾಲಯದಿಂದ ರಾಫೆಲ್ ದಾಖಲೆಗಳು ಕಳುವಾಗಿದೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ರಕ್ಷಣಾ ಸಚಿವಾಲಯದಿಂಡಲೇ ಕಳುವಾಗಿದೆ. ಈ ಕುರಿತು ನಾವು ಸಧ್ಯದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ....

ನವದೆಹಲಿ: ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು ರಕ್ಷಣಾ ಸಚಿವಾಲಯದಿಂದಲೇ ಕಳುವಾಗಿದೆ. ಈ ಕುರಿತು ನಾವು ಸಧ್ಯದಲ್ಲೇ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಇಲಾಖೆಯ ಮಾಜಿ ಅಥವಾ ಹಾಲಿ ಅಧಿಕಾರಿಗಳೇ ಈ ದಾಖಲೆಗಳನ್ನು ಕದ್ದಿರಬಹುದು, ನಾವೀಗಾಗಲೇ ಈ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಕೇಂದ್ರದ ಅಟಾರ್ನಿ ಜನರಲ್,ಕೆಕೆ ವೇಣುಗೋಪಾಲ್ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದ್ದಾರೆ.

ರಾಫೆಲ್ ಡೀಲ್ ಗೆ ಸಂಬಂಧಿಸಿ ಕಳೆದ ವರ್ಷ ಡಿಸೆಂಬರ್ 14ರಂದು ತಾನು ನೀಡಿದ್ದ ತೀರ್ಪಿನ ಮರುಪರಿಶೀಲನೆಯನ್ನು ನ್ಯಾಯಾಲಯ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಅರ್ಜಿದಾರ ವಕೀಲ ಪ್ರಶಾಂತ್ ಭೂಷಣ  ಅವರ ಕೈಯಲ್ಲಿರುವ ರಾಫೆಲ್ ದಾಖಲೆಗಳು ಕೇಂದ್ರ ರಕ್ಷಣಾ ಇಲಾಖೆಯಿಂದ ಕಳವಾದದ್ದು ಎಂದು ಸರ್ಕಾರಿ ವಕೀಲರು ಆರೋಪಿಸಿದ್ದಾರೆ.

ಇವು ರಹಸ್ಯ ದಾಖಲೆಗಳಾಗಿದ್ದು ಇದರಲಿನ ಅಂಶಗಳನ್ನು ದೇಶದ ರಕ್ಷಣಾ ಹಿತದೃಷ್ಟಿಯಿಂದ ಬಹಿರಂಗಪಡಿಸುವಂತಿಲ್ಲ. ಹೀಗಾಗಿ ಈಗ ದಾಖಲೆಗಳು ಪ್ರತಿವಾದಿಗಳ ಕೈಸೇರಿರುವುದು ಅಧಿಕೃತ ರಹಸ್ಯ ಕಾಯಿದೆಯ ಉಲ್ಲಂಘನೆಯಾಗಿದೆ. ಇವುಗಳನ್ನು ಇಲಾಖೆಯಿಂದ ಕದ್ದೊಯ್ಯಲಾಗಿದ್ದು ಈ ಸಂಬಂಧ ತನಿಖೆಯೂ ನಡೆಯುತ್ತಿದೆ ಎಂದು ಸರ್ಕಾರಿ ಪರ ಅಟಾರ್ನಿ ಜನರಲ್ ಹೇಳಿದ್ದಾರೆ.

ರಾಫೆಲ್ ಒಪ್ಪಂದದಲ್ಲಿ ಯಾವುದೇ ಅವ್ಯವಹಾರವಾಗಿಲ್ಲ, ರಕ್ಷಣಾ ವಿಮಾನ ಖರೀದಿ ವ್ಯವಹಾರವನ್ನು ಸಂದೇಹಿಸಲು ಯಾವ ಕಾರಣವಿಲ್ಲ ಎಂದು ಈ ಹಿಂದಿನ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಈ ತೀರ್ಪು ಮರುಪರಿಶೀಲನೆಗೆ ಕೋರಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ,  ಅರುಣ್ ಶೌರಿ, ಪ್ರಶಾಂತ್ ಭೂಷಣ್ ಅವರುಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್14ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT