ಅನಂತ್ ಅಂಬಾನಿ 
ದೇಶ

ಬದರಿನಾಥ, ಕೇದಾರನಾಥ ದೇಗುಲ ಸಮಿತಿಗೆ ಅನಂತ್ ಅಂಬಾನಿ ನೇಮಕ!

ಪ್ರಸಿದ್ಧ ತೀರ್ಥ ಕ್ಷೇತ್ರ ಬದರಿನಾಥ, ಕೇದಾರನಾಥ​ ದೇಗುಲ ಸಮಿತಿಗೆ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ಅವರು ಉದ್ಯಮಿ ಮುಖೇಶ್ ಅಂಬಾನಿ ...

ಡೆಹ್ರಾಡೂನ್: ಪ್ರಸಿದ್ಧ ತೀರ್ಥ ಕ್ಷೇತ್ರ ಬದರಿನಾಥ, ಕೇದಾರನಾಥ​ ದೇಗುಲ ಸಮಿತಿಗೆ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ಅವರು ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್​ ಅಂಬಾನಿ ಅವರನ್ನು ನೇಮಕ ಮಾಡಿದ್ದಾರೆ. 
ಮುಖೇಶ್​ಅಂಬಾನಿ ಕುಟುಂಬವು ಬದರಿನಾಥ ಮತ್ತು ಕೇದಾರನಾಥ ದೇಗುಲಕ್ಕೆ ನಿಯಮಿತವಾಗಿ ಭೇಟಿ ನೀಡುವ ಸಂಪ್ರದಾಯ ಹೊಂದಿದೆ. ಅಲ್ಲದೆ, ಕೇದಾರನಾಥ ಮತ್ತು ಬದರಿನಾಥ ದೇಗುಲಗಳ ಪುನರ್​ ನವೀಕರಣ ಕಾರ್ಯದಲ್ಲಿ ತಾವೂ ಭಾಗಿಯಾಗುವುದಾಗಿ ದೇಗುಲ ಸಮಿತಿಗೆ ಎರಡು ವರ್ಷಗಳ ಹಿಂದೆ ಮುಖೇಶ್​ಪ್ರಸ್ತಾವ ನೀಡಿದ್ದರು. 
ತಮ್ಮ ಕುಟುಂಬದಲ್ಲಿ ಯಾವುದಾದರೂ ಮಹತ್ತರ ಬೆಳವಣಿಗೆ ನಡೆಯುವುದಕ್ಕೂ ಮೊದಲು ದೇಗುಲಕ್ಕೆ ಭೇಟಿ ನೀಡುವುದನ್ನು ಮುಖೇಶ್​ ರೂಢಿಯಾಗಿಟ್ಟುಕೊಂಡಿದ್ದಾರೆ. ತಮ್ಮ ಪುತ್ರಿಯ ವಿವಾಹಕ್ಕೂ ಮೊದಲು ದೇಗುಲಕ್ಕೆ ಬಂದಿದ್ದ ಅವರು, ಆಶೀರ್ವಾದ ಪಡೆದು ಹೋಗಿದ್ದರು. ನಂತರ, ಆಹ್ವಾನ ಪತ್ರಿಕೆಯನ್ನು ಮೊದಲು ದೇಗುಲಕ್ಕೇ ಸಮರ್ಪಿಸಿದ್ದರು. 
ಕೇದಾರನಾಥ ದೇವಾಲಯ ಶಿವನ ದೇವಾಲಯವಾಗಿದೆ, ಮಂದಾಕಿನಿ ನದಿಯ ಹಿಮಾಲಯ ಪ್ರದೇಶದಲ್ಲಿ ಈ ದೇವಾಲಯ ಸ್ಥಾಪಿತವಾಗಿದೆ. ಕೇದಾರನಾಥ ದೇವಾಲಯ ಉತ್ತಾರಖಂಡ್ ನಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT