ಶ್ರೀ ರವಿಶಂಕರ್ ಗುರೂಜಿ 
ದೇಶ

ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ಒಟ್ಟಾಗಿ ಕೆಲಸ ಮಾಡಬೇಕು: ರವಿಶಂಕರ್ ಗುರೂಜಿ

ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ನಾವು ಎಲ್ಲಾ ಒಟ್ಟಾಗಿ...

ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ನಾವು ಎಲ್ಲಾ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಂಧಾನ ಸಮಿತಿಯ ಸದಸ್ಯ ಶ್ರೀ ರವಿಶಂಕರ್ ಗುರೂಜಿ ಅವರು ಶುಕ್ರವಾರ ಹೇಳಿದ್ದಾರೆ. 
ಸುಪ್ರೀಂ ಕೋರ್ಟ್ ಇಂದು ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಫ್ಎಂಐ ಖಲೀಫುಲ್ಲಾ ನೇತೃತ್ವದಲ್ಲಿ ಸಂಧಾನ ಸಮಿತಿ ರಚಿಸಿದ್ದು, ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಪಂಚು ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಟ್ಟೀಟ್ ಮಾಡಿರುವ ರವಿಂಶಕರ್ ಗೂರುಜಿ ಅವರು, ನಾನು ಈಗಷ್ಟೇ ಈ ಸುದ್ದಿಯ ಬಗ್ಗೆ ಕೇಳಿದೆ. ನನ್ನನ್ನೂ ಸಂಧಾನ ಸಮಿತಿಯಲ್ಲಿ ನೇಮಿಸಿದ್ದು ಸಂತೋಷ. ಸಂಧಾನ ನಡೆಸಿಯೇ ಸಮಸ್ಯೆ ಬಗೆಹರಿಸುವುದು ದೇಶದ ಒಳಿತಿನ ದೃಷ್ಟಿಯಿಂದಲೂ ಉತ್ತಮ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರು ಹೇಳಿದ್ದಾರೆ.
ಸಮಾಜದಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಮೂಲಕ ದೀರ್ಘಕಾಲಿನ ಸಂಘರ್ಷ ಅಂತ್ಯಗೊಳಿಸಲು ನಾವು ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದಿದ್ದಾರೆ.
ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ನಮ್ಮ ಕನಸುಗಳನ್ನು ಸಕಾರಗೊಳಿಸಬೇಕು ಎಂದು ರವಿಶಂಕರ್ ಗುರೂಜಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT