ಸಾಂದರ್ಭಿಕ ಚಿತ್ರ 
ದೇಶ

ಸರ್ಕಾರದಿಂದ ಆರ್ಥಿಕ ನೆರವು ನಿರೀಕ್ಷೆಯಲ್ಲಿ ಶೇ.35ಕ್ಕೂ ಹೆಚ್ಚು ಮಲ ಹೊರುವ ಕಾರ್ಮಿಕರು

ರಾಜ್ಯ ಸರ್ಕಾರಗಳು ಗುರುತಿಸಿರುವ 45 ಸಾವಿರಕ್ಕೂ ಅಧಿಕ ಮಲ ಹೊರುವ ಕಾರ್ಮಿಕರ ಪೈಕಿ ಶೇಕಡಾ 37ಕ್ಕೂ...

ನವದೆಹಲಿ: ರಾಜ್ಯ ಸರ್ಕಾರಗಳು ಗುರುತಿಸಿರುವ 45 ಸಾವಿರಕ್ಕೂ ಅಧಿಕ ಮಲ ಹೊರುವ ಕಾರ್ಮಿಕರ ಪೈಕಿ ಶೇಕಡಾ 37ಕ್ಕೂ ಅಧಿಕ ಮಂದಿಗೆ ಸರ್ಕಾರದ ಪುನರ್ವಸತಿ ಯೋಜನೆಯಡಿ ಸಿಗಬೇಕಾದ ನಗದು ಹಣದ ನೆರವು ಇನ್ನೂ ಕೂಡ ಸಿಕ್ಕಿಲ್ಲ.
2013ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಈ ಅಂಕಿಅಂಶ ಲಭ್ಯವಾಗಿದ್ದು ಆ ವರ್ಷ ವಿವಿಧ ರಾಜ್ಯಗಳಲ್ಲಿ 13,770 ಮಲ ಹೊರುವ ಕಾರ್ಮಿಕರನ್ನು ಗುರುತಿಸಲಾಗಿತ್ತು. ಕೇಂದ್ರ ಸರ್ಕಾರದ ಪುನರ್ವಸತಿ ಯೋಜನೆಯಡಿ ಮಲ ಹೊರುವ ಕಾರ್ಮಿಕರಿಗೆ 40 ಸಾವಿರ ರೂಪಾಯಿ ಹಣಕಾಸಿನ ನೆರವು ನೀಡಿ ಅವರನ್ನು ಈ ಕೆಟ್ಟ ಸಂಪ್ರದಾಯದ ಕೆಲಸಗಳಿಂದ ಹೊರಗೆ ತರುವುದು ಉದ್ದೇಶವಾಗಿದೆ.
ಇಲ್ಲಿಯವರೆಗೆ ಕಳೆದ ವರ್ಷದವರೆಗೆ ನಡೆಸಿರುವ ಅಂಕಿಅಂಶ ಪ್ರಕಾರ 30 ಸಾವಿರಕ್ಕೂ ಅಧಿಕ ಮಲ ಹೊರುವ ಕಾರ್ಮಿಕರನ್ನು ಗುರುತಿಸಲಾಗಿದೆ. ಅವರಲ್ಲಿ ಸುಮಾರು 16 ಸಾವಿರ ಮಂದಿಗೆ ಮಾತ್ರ ಕೇಂದ್ರ ಸರ್ಕಾರದ ಹಣಕಾಸಿನ ನೆರವು ಸಿಕ್ಕಿದೆಯಷ್ಟೆ. 2013ರಲ್ಲಿ ಸಹಾಯ ಸಿಕ್ಕಿದ ಮಲ ಹೊರುವ ಕಾರ್ಮಿಕರು ಮತ್ತು ಸದ್ಯ ನಡೆದ ಸಮೀಕ್ಷೆ ಪ್ರಕಾರ ಸುಮಾರು 28 ಸಾವಿರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಹಣಕಾಸಿನ ನೆರವು ಸಿಗಬೇಕಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಸಚಿವಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಅಕ್ಟೋಬರ್ ವರೆಗೆ ನಡೆದ ಸಮೀಕ್ಷೆ ಪ್ರಕಾರ, 20 ಸಾವಿರಕ್ಕೂ ಅಧಿಕ ಮಲ ಹೊರುವ ಕಾರ್ಮಿಕರನ್ನು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಹಣಕಾಸು ಮತ್ತು ಅಭಿವೃದ್ಧಿ ನಿಗಮ ತಿಳಿಸಿದ್ದು ಅವರಲ್ಲಿ 8 ಸಾವಿರ ಮಂದಿಗೆ ಧನ ಸಹಾಯ ದೊರಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT