ದಾಳಿ ನಡೆದ ಸ್ಥಳ 
ದೇಶ

3 ಬಾರಿ ಯತ್ನಿಸಿದರೂ ಪ್ರವೇಶ ಇಲ್ಲ: ಬಾಲಕೋಟ್​ ದಾಳಿ ಸ್ಥಳಕ್ಕೆ ಮಾಧ್ಯಮಗಳಿಗೆ ಪಾಕ್​ ನಿರ್ಬಂಧ

ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿದ ಬಾಲಕೋಟ್​ ನ ಉಗ್ರರ ಅಡಗುತಾಣಗಳಿಗೆ ಭೇಟಿ ನೀಡಲು ಪತ್ರಕರ್ತರಿಗೆ ಪಾಕಿಸ್ತಾನ ಸರ್ಕಾರ...

ಇಸ್ಲಾಮಾಬಾದ್: ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿದ ಬಾಲಕೋಟ್​ ನ ಉಗ್ರರ ಅಡಗುತಾಣಗಳಿಗೆ ಭೇಟಿ ನೀಡಲು ಪತ್ರಕರ್ತರಿಗೆ ಪಾಕಿಸ್ತಾನ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದೆ.
ಜೈಶ್ - ಇ- ಮೊಹಮ್ಮದ್ ಉಗ್ರ ಸಂಘಟನೆಯ ಮದರಸಾ ಇರುವ ಸ್ಥಳಕ್ಕೆ ಭೇಟಿ ನೀಡಲು ಪಾಕಿಸ್ತಾನ ಸರ್ಕಾರ ರಾಯಟರ್ಸ್ ಸುದ್ದಿಸಂಸ್ಥೆಯ ಪ್ರತಿನಿಧಿಗಳಿಗೆ ಮತ್ತೊಮ್ಮೆ ಅವಕಾಶ ನಿರಾಕರಿಸಿದೆ. ಕಳೆದ 9 ದಿನಗಳಲ್ಲಿ ಮೂರನೇ ಬಾರಿ ಮಾಧ್ಯಮ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.
ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಲು ಮೂರು ಬಾರಿ ಯತ್ನಿಸಿ ವಿಫಲವಾಗಿದ್ದೇವೆ. ಭದ್ರತಾ ದೃಷ್ಟಿಯಿಂದ ಪಾಕ್​ ಸೇನೆಯು ಯಾರಿಗೂ ಸ್ಫೋಟ ಸ್ಥಳಕ್ಕೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ರಾಯಟರ್ಸ್ ವರದಿಗಾರರು ಹೇಳಿದ್ದಾರೆ.
ವೈಮಾನಿಕ ದಾಳಿಯಲ್ಲಿ ಭಾರೀ ಸಂಖ್ಯೆಯ ಜೈಷೆ ಉಗ್ರರು, ತರಬೇತಿದಾರರು, ಉಗ್ರ ಸಂಘಟನೆಯ ಹಿರಿಯ ಕಮಾಂಡರ್​ಗಳು, ಜಿಹಾದಿಗಳು ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ಅವರು ಹೇಳಿದ್ದಾರೆ. ಆದರೆ ದಾಳಿಯಲ್ಲಿ ಯಾವುದೇ ಸಾವು-ನೋವಾಗಿಲ್ಲ. ಕೆಲವು ಪೈನ್​ ಮರಗಳು ಮುರಿದಿವೆ ಎಂದು ಪಾಕ್ ವಾದಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT