ದಾಳಿ ನಡೆದ ಸ್ಥಳ 
ದೇಶ

3 ಬಾರಿ ಯತ್ನಿಸಿದರೂ ಪ್ರವೇಶ ಇಲ್ಲ: ಬಾಲಕೋಟ್​ ದಾಳಿ ಸ್ಥಳಕ್ಕೆ ಮಾಧ್ಯಮಗಳಿಗೆ ಪಾಕ್​ ನಿರ್ಬಂಧ

ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿದ ಬಾಲಕೋಟ್​ ನ ಉಗ್ರರ ಅಡಗುತಾಣಗಳಿಗೆ ಭೇಟಿ ನೀಡಲು ಪತ್ರಕರ್ತರಿಗೆ ಪಾಕಿಸ್ತಾನ ಸರ್ಕಾರ...

ಇಸ್ಲಾಮಾಬಾದ್: ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿದ ಬಾಲಕೋಟ್​ ನ ಉಗ್ರರ ಅಡಗುತಾಣಗಳಿಗೆ ಭೇಟಿ ನೀಡಲು ಪತ್ರಕರ್ತರಿಗೆ ಪಾಕಿಸ್ತಾನ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದೆ.
ಜೈಶ್ - ಇ- ಮೊಹಮ್ಮದ್ ಉಗ್ರ ಸಂಘಟನೆಯ ಮದರಸಾ ಇರುವ ಸ್ಥಳಕ್ಕೆ ಭೇಟಿ ನೀಡಲು ಪಾಕಿಸ್ತಾನ ಸರ್ಕಾರ ರಾಯಟರ್ಸ್ ಸುದ್ದಿಸಂಸ್ಥೆಯ ಪ್ರತಿನಿಧಿಗಳಿಗೆ ಮತ್ತೊಮ್ಮೆ ಅವಕಾಶ ನಿರಾಕರಿಸಿದೆ. ಕಳೆದ 9 ದಿನಗಳಲ್ಲಿ ಮೂರನೇ ಬಾರಿ ಮಾಧ್ಯಮ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.
ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಲು ಮೂರು ಬಾರಿ ಯತ್ನಿಸಿ ವಿಫಲವಾಗಿದ್ದೇವೆ. ಭದ್ರತಾ ದೃಷ್ಟಿಯಿಂದ ಪಾಕ್​ ಸೇನೆಯು ಯಾರಿಗೂ ಸ್ಫೋಟ ಸ್ಥಳಕ್ಕೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ರಾಯಟರ್ಸ್ ವರದಿಗಾರರು ಹೇಳಿದ್ದಾರೆ.
ವೈಮಾನಿಕ ದಾಳಿಯಲ್ಲಿ ಭಾರೀ ಸಂಖ್ಯೆಯ ಜೈಷೆ ಉಗ್ರರು, ತರಬೇತಿದಾರರು, ಉಗ್ರ ಸಂಘಟನೆಯ ಹಿರಿಯ ಕಮಾಂಡರ್​ಗಳು, ಜಿಹಾದಿಗಳು ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ಅವರು ಹೇಳಿದ್ದಾರೆ. ಆದರೆ ದಾಳಿಯಲ್ಲಿ ಯಾವುದೇ ಸಾವು-ನೋವಾಗಿಲ್ಲ. ಕೆಲವು ಪೈನ್​ ಮರಗಳು ಮುರಿದಿವೆ ಎಂದು ಪಾಕ್ ವಾದಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT