ದಾಳಿ ನಡೆದ ಸ್ಥಳ 
ದೇಶ

3 ಬಾರಿ ಯತ್ನಿಸಿದರೂ ಪ್ರವೇಶ ಇಲ್ಲ: ಬಾಲಕೋಟ್​ ದಾಳಿ ಸ್ಥಳಕ್ಕೆ ಮಾಧ್ಯಮಗಳಿಗೆ ಪಾಕ್​ ನಿರ್ಬಂಧ

ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿದ ಬಾಲಕೋಟ್​ ನ ಉಗ್ರರ ಅಡಗುತಾಣಗಳಿಗೆ ಭೇಟಿ ನೀಡಲು ಪತ್ರಕರ್ತರಿಗೆ ಪಾಕಿಸ್ತಾನ ಸರ್ಕಾರ...

ಇಸ್ಲಾಮಾಬಾದ್: ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿದ ಬಾಲಕೋಟ್​ ನ ಉಗ್ರರ ಅಡಗುತಾಣಗಳಿಗೆ ಭೇಟಿ ನೀಡಲು ಪತ್ರಕರ್ತರಿಗೆ ಪಾಕಿಸ್ತಾನ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದೆ.
ಜೈಶ್ - ಇ- ಮೊಹಮ್ಮದ್ ಉಗ್ರ ಸಂಘಟನೆಯ ಮದರಸಾ ಇರುವ ಸ್ಥಳಕ್ಕೆ ಭೇಟಿ ನೀಡಲು ಪಾಕಿಸ್ತಾನ ಸರ್ಕಾರ ರಾಯಟರ್ಸ್ ಸುದ್ದಿಸಂಸ್ಥೆಯ ಪ್ರತಿನಿಧಿಗಳಿಗೆ ಮತ್ತೊಮ್ಮೆ ಅವಕಾಶ ನಿರಾಕರಿಸಿದೆ. ಕಳೆದ 9 ದಿನಗಳಲ್ಲಿ ಮೂರನೇ ಬಾರಿ ಮಾಧ್ಯಮ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.
ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಲು ಮೂರು ಬಾರಿ ಯತ್ನಿಸಿ ವಿಫಲವಾಗಿದ್ದೇವೆ. ಭದ್ರತಾ ದೃಷ್ಟಿಯಿಂದ ಪಾಕ್​ ಸೇನೆಯು ಯಾರಿಗೂ ಸ್ಫೋಟ ಸ್ಥಳಕ್ಕೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ರಾಯಟರ್ಸ್ ವರದಿಗಾರರು ಹೇಳಿದ್ದಾರೆ.
ವೈಮಾನಿಕ ದಾಳಿಯಲ್ಲಿ ಭಾರೀ ಸಂಖ್ಯೆಯ ಜೈಷೆ ಉಗ್ರರು, ತರಬೇತಿದಾರರು, ಉಗ್ರ ಸಂಘಟನೆಯ ಹಿರಿಯ ಕಮಾಂಡರ್​ಗಳು, ಜಿಹಾದಿಗಳು ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ಅವರು ಹೇಳಿದ್ದಾರೆ. ಆದರೆ ದಾಳಿಯಲ್ಲಿ ಯಾವುದೇ ಸಾವು-ನೋವಾಗಿಲ್ಲ. ಕೆಲವು ಪೈನ್​ ಮರಗಳು ಮುರಿದಿವೆ ಎಂದು ಪಾಕ್ ವಾದಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT