ಸಂಗ್ರಹ ಚಿತ್ರ 
ದೇಶ

ಸಂಧಾನ ಸಮಿತಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ: ಜಫರ್ಯಾಬ್ ಜಿಲಾನಿ

ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ನೇಮಕವಾಗಿರುವ ಸಂಧಾನ ಸಮಿತಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಎಐಎಂಪಿಎಲ್ ಬಿ ಮುಖ್ಯಸ್ಥ ಹಾಗೂ ಬಾಬ್ರಿ ಮಸೀದಿ ಆ್ಯಕ್ಷನ್ ಕಮಿಟಿ ವಕ್ತಾರ ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.

ನವದೆಹಲಿ: ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ನೇಮಕವಾಗಿರುವ ಸಂಧಾನ ಸಮಿತಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಎಐಎಂಪಿಎಲ್ ಬಿ ಮುಖ್ಯಸ್ಥ ಹಾಗೂ ಬಾಬ್ರಿ ಮಸೀದಿ ಆ್ಯಕ್ಷನ್ ಕಮಿಟಿ ವಕ್ತಾರ  ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೇ ಸುಪ್ರೀಂ ಕೋರ್ಟ್ ಸಂಧಾನ ಪ್ರಕ್ರಿಯೆಗೆ ತಾವು ಸಹಕಾರ ನೀಡುವುದಾಗಿ ಘೋಷಣೆ ಮಾಡಿದ್ದೆವು. ಈಗ ಕೋರ್ಟ್ ಸಂಧಾನ ಸಮಿತಿ ನೇಮಕ ಮಾಡಿದೆ. ಈಗಲೂ ನಾವು ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಂಧಾನ ಸಮಿತಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಈಗ ನಮ್ಮ ವಾದಗಳನ್ನು ಸಂಧಾನ ಸಮಿತಿ ಮುಂದೆ ಮಂಡಿಸುತ್ತೇವೆ. ಆದರೆ ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಲ್ಲ ಎಂದು ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.
ರಾಜಕೀಯವಾಗಿ ಮತ್ತು ಧಾರ್ಮಿಕವಾಗಿ ಸೂಕ್ಷ್ಮವಾಗಿರುವ ಅಯೋಧ್ಯ ರಾಮಜನ್ಮ ಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ಇಂದು ಮಹತ್ವಗ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಸಂಧಾನಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದಲ್ಲಿ ಮೂರು ಸದಸ್ಯರ ಸಂಧಾನ ಸಮಿತಿ ನೇಮಕ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT