ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ 
ದೇಶ

ಅಯೋಧ್ಯೆ ಭೂ ವಿವಾದಕ್ಕೆ ಸೌಹಾರ್ದಯುತ ಪರಿಹಾರ: ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ

ಯಾವುದೇ ಕೋಮಿನ ಭಾವನೆಗಳಿಗೂ ಧಕ್ಕೆಯಾಗದ ರೀತಿಯಲ್ಲಿ ಅಯೋಧ್ಯೆ ಭೂ ವಿವಾದ ಪ್ರಕರಣವನ್ನು ಸ್ನೇಹ-ಸೌಹಾರ್ಧಯುತವಾಗಿ ಪರಿಷ್ಕರಿಸುತ್ತೇವೆ ಎಂದು ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ ಹೇಳಿದ್ದಾರೆ.

ನವದೆಹಲಿ: ಯಾವುದೇ ಕೋಮಿನ ಭಾವನೆಗಳಿಗೂ ಧಕ್ಕೆಯಾಗದ ರೀತಿಯಲ್ಲಿ ಅಯೋಧ್ಯೆ ಭೂ ವಿವಾದ ಪ್ರಕರಣವನ್ನು ಸ್ನೇಹ-ಸೌಹಾರ್ಧಯುತವಾಗಿ ಪರಿಷ್ಕರಿಸುತ್ತೇವೆ ಎಂದು ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ ಹೇಳಿದ್ದಾರೆ.
ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಸಂಧಾನ ಸಮಿತಿ ನೇಮಕ ಮಾಡಿ ಸಮಿತಿ ಮೂಲಕವೇ ವಿವಾದ ಇತ್ಯರ್ಥವಾಗಬೇಕು ಎಂಬ ಮಹತ್ವದ ತೀರ್ಪು ನೀಡಿದೆ. ಅತ್ತ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆಯೇ ಇತ್ತ ಈ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಸಂಧಾನ ಸಮಿತಿ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ಅವರು, ಸುಪ್ರೀಂ ಕೋರ್ಟ್ ತಮ್ಮನ್ನು ಸಂಧಾನ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಆದರೆ ಈ ವರೆಗೂ ತಮಗೆ ಕೋರ್ಟ್ ಆದೇಶದ ಅಧಿಕೃತ ಪ್ರತಿ ಸಿಕ್ಕಿಲ್ಲ. ಶೀಘ್ರ ಪ್ರತಿ ಪಡೆಯಲು ಪ್ರಯತ್ನಿಸುತ್ತೇನೆ.
ಕೋರ್ಟ್ ಹಾಕಿರುವ ನಿಬಂಧನೆಗೊಳಪಟ್ಟು ಸ್ನೇಹ ಮತ್ತು ಸೌಹಾರ್ಧಯುತವಾಗಿ ವಿವಾದವನ್ನು ಇತ್ಯರ್ಥಗೊಳಿಸುತ್ತೇವೆ. ಸಂಧಾನ ಪ್ರಕ್ರಿಯೆಯಲ್ಲಿ ಅಗತ್ಯ ಬಿದ್ದರೆ ಸಾಂವಿಧಾನಿಕ ಪೀಠವನ್ನೇ ಸಲಹೆ ಕೇಳಿ ಪಡೆಯುತ್ತೇವೆ ಎಂದು ಖಲೀಫುಲ್ಲಾ ಹೇಳಿದ್ದಾರೆ.
ಇಂದು ಬೆಳಗ್ಗೆ ಪ್ರಕರಣ ಸಂಬಂಧ ತನ್ನ ಅಂತಿಮ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಸಂಧಾನದ ಮೂಲಕವೇ ಆಯೋಧ್ಯೆ ಭೂ ವಿವಾದ ಸಮಸ್ಯೆ ಇತ್ಯರ್ಥವಾಗಬೇಕು ಎಂದು ಹೇಳಿತ್ತು. ಅಲ್ಲದೆ ಈ ಸಂಧಾನ ಪ್ರಕ್ರಿಯೆಗಾಗಿ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ, ಆರ್ಟ್ ಆಫ್ ಲಿವಿಂಗ್ ಸಂಸ್ಛೆಯ ಮುಖ್ಯಸ್ಥರಾದ ರವಿಶಂಕರ್ ಗುರೂಜಿ ಮತ್ತು ವಕೀಲ ಶ್ರೀರಾಮ್ ಪಂಚು ಅವರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT