ಸಾಂದರ್ಭಿಕ ಚಿತ್ರ 
ದೇಶ

ಪಾಕಿಸ್ತಾನದಿಂದ ಮತ್ತೆ ಮೂರು ಕಡೆಗಳಲ್ಲಿ ಕದನ ವಿರಾಮ ಉಲ್ಲಂಘನೆ: ವಿಶೇಷ ಪೊಲೀಸ್ ಅಧಿಕಾರಿಗೆ ಗಾಯ

ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಂತೆ ಇರುವ ಜಮ್ಮು-ಕಾಶ್ಮೀರದಲ್ಲಿನ ಮೂರು ಕಡೆಗಳಲ್ಲಿ ಇಂದು ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ರಜೌರಿ: ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಂತೆ ಇರುವ ಜಮ್ಮು-ಕಾಶ್ಮೀರದಲ್ಲಿನ ಮೂರು ಕಡೆಗಳಲ್ಲಿ ಇಂದು ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ಜಮ್ಮು- ಕಾಶ್ಮೀರದ ರಜೌರಿ, ಪೊಂಛ್, ಮತ್ತು ಅಕ್ನೂರು ವಲಯಗಳಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿದ್ದಾರೆ.

ಪೊಂಛ್ ವಲಯದಲ್ಲಿ ಇಂದು ಬೆಳಗ್ಗೆ ಪಾಕಿಸ್ತಾನಿ ಸೈನಿಕರು ಭಾರೀ ಶೆಲ್ ದಾಳಿ ನಡೆಸಿದ್ದರಿಂದ ವಿಶೇಷ ಪೂಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ನಂತರ ಇಂದು ಸಂಜೆ ಅಕ್ನೋರು ವಲಯದ  ಕೆರಿ ಬೆಟ್ಟಲ್ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿದ್ದಾರೆ. ರಜೌರಿ ಜಿಲ್ಲೆಯ ಸುಂದರ್ ಬನಿ ವಲಯದಲ್ಲೂ ಕದನ ವಿರಾಮ ಉಲ್ಲಂಘನೆಯಾಗಿದೆ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT