ಮಿರ್ವೈಜ್ ಉಮರ್ ಪಾರೂಖ್, ಸಯ್ಯದ್ ಆಲಿ ಶಾ ಗಿಲಾನಿ ಮತ್ತು ಮೊಹಮ್ಮದ್ ಯಾಸಿನ್ ಮಲ್ಲಿಕ್ 
ದೇಶ

ಉಗ್ರರಿಗೆ ಹಣಕಾಸು: ವಿಚಾರಣೆಗೆ ಹಾಜರಾಗುವಂತೆ ಗಿಲಾನಿ ಪುತ್ರ ಹಾಗೂ ಮಿರ್ವೈಜ್ ಗೆ ಎನ್ ಐಎ ಸಮನ್ಸ್

ವಿಚಾರಣೆಗೆ ಹಾಜರಾಗುವಂತೆ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್ ಆಲಿ ಶಾ ಗಿಲಾನಿ ಪುತ್ರ ಹಾಗೂ ಹುರಿಯತ್ ಕಾನ್ಪರೆನ್ಸ್ ಮುಖ್ಯಸ್ಥ ಮಿರ್ವೈಜ್ ಉಮರ್ ಪಾರೂಖ್ ಅವರಿಗೆ ಎನ್ ಐಎ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.

ಶ್ರೀನಗರ: ಉಗ್ರರಿಗೆ ಹಣಕಾಸು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್ ಆಲಿ ಶಾ ಗಿಲಾನಿ ಪುತ್ರ ಹಾಗೂ ಹುರಿಯತ್ ಕಾನ್ಪರೆನ್ಸ್  ಮುಖ್ಯಸ್ಥ ಮಿರ್ವೈಜ್ ಉಮರ್ ಪಾರೂಖ್ ಅವರಿಗೆ ರಾಷ್ಟ್ರೀಯ ತನಿಖಾ ದಳದ  ಅಧಿಕಾರಿಗಳು ಸಮನ್ಸ್  ಜಾರಿ ಮಾಡಿದ್ದಾರೆ.

ಸೋಮವಾರ ದೆಹಲಿಯಲ್ಲಿರುವ ರಾಷ್ಟ್ರೀಯ ತನಿಖಾ ದಳದ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಉಗ್ರರಿಗೆ ಹಣಕಾಸು ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಮಿರ್ವೈಜ್
ಸೇರಿದಂತೆ  ಜಮ್ಮು- ಕಾಶ್ಮೀರದಲ್ಲಿನ  ಪ್ರತ್ಯೇಕತಾವಾದಿಗಳ ಮನೆಗಳಲ್ಲಿ ಎನ್ ಐಎ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು.
ಸಿಆರ್ ಪಿಎಫ್ ಸಿಬ್ಬಂದಿ,ಪೊಲೀಸರನ್ನೊಳಗೊಂಡ ಎನ್ ಐಎ ತಂಡ,ತೆಹ್ರರಿಕ್ - ಇ- ಹುರಿಯತ್ ಮುಖ್ಯಸ್ಥ ನಾಸೀಮ್ ಗಿಲಾನಿ,ಅಸ್ರಪ್ ಸೆಹ್ರಿ,ಮಿರ್ವೈಜ್ ಸೇರಿದಂತೆ ಅನೇಕ  ಪ್ರತ್ಯೇಕತಾವಾದಿ ಮುಖಂಡರುಗಳ ನಿವಾಸಗಳಲ್ಲಿ ಶೋಧ ನಡೆಸಿದ್ದರು.
ಜಮ್ಮು ಕಾಶ್ಮೀರ ಲಿಬರೇಷನ್ ಫ್ರಂಟ್ ಮುಖಂಡ ಯಾಸೀನ್ ಮಲ್ಲಿಕ್, ಸಬೀರ್ ಶಾ,  ಜಾಫರ್ ಭಟ್, ಮಸರತ್ ಅಲಂ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು. ಮಿರ್ ವೈಜ್ ಹಾಗೂ ಸೆಹ್ರಿ ಮತ್ತಿತರ ಮುಖಂಡರನ್ನು ಕೆಲಕಾಲ ಜೈಲಿಗಟ್ಟಲಾಗಿತ್ತು.
ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ,ಸರ್ಕಾರಿ ಶಾಲೆಗಳಿಗೆ ಬೆಂಕಿ ಮತ್ತಿತರ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ಯಾರು ನೀಡುತ್ತಿದ್ದರು ಎಂಬುದರ ಬಗ್ಗೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ಎನ್ ಐಎ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT